ಅನುಕಂಪ ಆಧಾರದಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಕೆಲಸ ಪಡೆದ ಉಮೇಶ್ ಗೌಡ ಮುಂಬಡ್ತಿಗಾಗಿ 2007, 2008, 2009ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮಾನಸ ಗಂಗೋತ್ರಿ, ಮೈಸೂರು ಹೆಸರಿನಲ್ಲಿ ಪದವಿಯ ನಕಲಿ ಅಂಕಪಟ್ಟಿಗಳು, ಪಾಸಿಂಗ್ ಸರ್ಟೀಫಿಕೆಟ್ ಹಾಗೂ ನಕಲಿ ಮೈಗ್ರೇಶನ್ ಪ್ರಮಾಣ ಪತ್ರಗಳನ್ನು ಸೃಷ್ಟಿಸಿಕೊಂಡು ಸರ್ಕಾರಕ್ಕೆ ಸಲ್ಲಿಸಿ ತಾಲ್ಲೂಕು ಯೋಜನಾಧಿಕಾರಿಯಾಗಿ ಹುದ್ದೆಗೆ ಮುಂಬಡ್ತಿ ಪಡೆದು ಇಲ್ಲಿನ ತಾಲ್ಲೂಕು ಪಂಚಾಯ್ತಿಯಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.