<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಬ್ಯಾಲಹುಣ್ಸಿ ಗ್ರಾಮದಲ್ಲಿ ಮುಸ್ಲಿಮರಿಲ್ಲ. ಆದರೆ, ಹಿಂದೂಗಳು ಮೊಹರಂ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಾರೆ. ವಂತಿಗೆ ಸಂಗ್ರಹಿಸಿ, ಎಲ್ಲರೂ ಜೊತೆಗೂಡಿ ಮೊಹರಂ ಆಚರಿಸುತ್ತಾರೆ.</p>.<p>ಗ್ರಾಮದ ಶಿರಹಟ್ಟಿ ಪಕ್ಕೀರಸ್ವಾಮಿ ದೇವಸ್ಥಾನದಲ್ಲಿ ಪೀರಲ ದೇವರನ್ನು ಪ್ರತಿಷ್ಠಾಪಿಸಲಾಗಿದೆ. ಸಮೀಪದ ಮಕರಬ್ಬಿ ಗ್ರಾಮದಿಂದ ಮುಜಾವರರನ್ನು ಆಹ್ವಾನಿಸಿ ಮೊಹರಂ ವಿಧಿ ವಿಧಾನ ನಡೆಸಲಾಗುತ್ತದೆ.</p>.<p>ಶುಕ್ರವಾರ ರಾತ್ರಿಯಿಡೀ ‘ಖತಲ್ ಕಿ ರಾತ್’ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಪೀರಲ ದೇವರು ಪ್ರತಿಷ್ಠಾಪಿಸಿರುವ ಕಟ್ಟೆಯ ಮುಂದೆ ಅಲಾಯಿ ಕುಣಿಯಲ್ಲಿ ನಿಗಿ ನಿಗಿ ಕೆಂಡ ತುಳಿದು ಯುವಕರು ಹರಕೆ ತೀರಿಸಿದರು. ಮಹಿಳೆಯರು, ಮಕ್ಕಳು ಶ್ರದ್ಧಾಭಕ್ತಿಯಿಂದ ಸಕ್ಕರೆ, ಬೆಲ್ಲದ ನೈವೇದ್ಯ ಅರ್ಪಿಸುತ್ತಾರೆ.</p>.<p>ಶನಿವಾರ ಗ್ರಾಮದ ಮುಖ್ಯ ಬೀದಿಯಲ್ಲಿ ಪೀರಲ ದೇವರ ಮೂರ್ತಿಗಳ ಮೆರವಣಿಗೆ ನಡೆಸಿ ವಿಸರ್ಜಿಸಲಾಗುತ್ತದೆ.</p>.<p>‘ಗ್ರಾಮದಲ್ಲಿ ಎಲ್ಲ ಜಾತಿಯವರು ಒಗ್ಗಟ್ಟಿನಿಂದ ಮೊಹರಂ ಆಚರಿಸುತ್ತೇವೆ. ದೇವರು ಇಷ್ಟಾರ್ಥ ನೇರವೇರಿಸುವ ನಂಬಿಕೆಯಿಂದ ಸುತ್ತಮುತ್ತಲ ಗ್ರಾಮಗಳ ಭಕ್ತರು ಇಲ್ಲಿಗೆ ಬಂದು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಾರೆ’ ಎಂದು ಮುಖಂಡ ಬಾರಿಕರ ಲಕ್ಷ್ಮಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಬ್ಯಾಲಹುಣ್ಸಿ ಗ್ರಾಮದಲ್ಲಿ ಮುಸ್ಲಿಮರಿಲ್ಲ. ಆದರೆ, ಹಿಂದೂಗಳು ಮೊಹರಂ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಾರೆ. ವಂತಿಗೆ ಸಂಗ್ರಹಿಸಿ, ಎಲ್ಲರೂ ಜೊತೆಗೂಡಿ ಮೊಹರಂ ಆಚರಿಸುತ್ತಾರೆ.</p>.<p>ಗ್ರಾಮದ ಶಿರಹಟ್ಟಿ ಪಕ್ಕೀರಸ್ವಾಮಿ ದೇವಸ್ಥಾನದಲ್ಲಿ ಪೀರಲ ದೇವರನ್ನು ಪ್ರತಿಷ್ಠಾಪಿಸಲಾಗಿದೆ. ಸಮೀಪದ ಮಕರಬ್ಬಿ ಗ್ರಾಮದಿಂದ ಮುಜಾವರರನ್ನು ಆಹ್ವಾನಿಸಿ ಮೊಹರಂ ವಿಧಿ ವಿಧಾನ ನಡೆಸಲಾಗುತ್ತದೆ.</p>.<p>ಶುಕ್ರವಾರ ರಾತ್ರಿಯಿಡೀ ‘ಖತಲ್ ಕಿ ರಾತ್’ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಪೀರಲ ದೇವರು ಪ್ರತಿಷ್ಠಾಪಿಸಿರುವ ಕಟ್ಟೆಯ ಮುಂದೆ ಅಲಾಯಿ ಕುಣಿಯಲ್ಲಿ ನಿಗಿ ನಿಗಿ ಕೆಂಡ ತುಳಿದು ಯುವಕರು ಹರಕೆ ತೀರಿಸಿದರು. ಮಹಿಳೆಯರು, ಮಕ್ಕಳು ಶ್ರದ್ಧಾಭಕ್ತಿಯಿಂದ ಸಕ್ಕರೆ, ಬೆಲ್ಲದ ನೈವೇದ್ಯ ಅರ್ಪಿಸುತ್ತಾರೆ.</p>.<p>ಶನಿವಾರ ಗ್ರಾಮದ ಮುಖ್ಯ ಬೀದಿಯಲ್ಲಿ ಪೀರಲ ದೇವರ ಮೂರ್ತಿಗಳ ಮೆರವಣಿಗೆ ನಡೆಸಿ ವಿಸರ್ಜಿಸಲಾಗುತ್ತದೆ.</p>.<p>‘ಗ್ರಾಮದಲ್ಲಿ ಎಲ್ಲ ಜಾತಿಯವರು ಒಗ್ಗಟ್ಟಿನಿಂದ ಮೊಹರಂ ಆಚರಿಸುತ್ತೇವೆ. ದೇವರು ಇಷ್ಟಾರ್ಥ ನೇರವೇರಿಸುವ ನಂಬಿಕೆಯಿಂದ ಸುತ್ತಮುತ್ತಲ ಗ್ರಾಮಗಳ ಭಕ್ತರು ಇಲ್ಲಿಗೆ ಬಂದು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಾರೆ’ ಎಂದು ಮುಖಂಡ ಬಾರಿಕರ ಲಕ್ಷ್ಮಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>