<p><strong>ಕೊಟ್ಟೂರು</strong>: ತಾಲ್ಲೂಕಿನಾದ್ಯಂತ ಸೊಸೈಟಿಗಳಿಗೆ ಹಾಗೂ ರಸಗೊಬ್ಬರ ಮಳಿಗೆಗಳಿಗೆ ಯೂರಿಯಾ ಗೊಬ್ಬರ ಬಂದಿದೆ ಎಂದು ಗೊತ್ತಾದರೆ ಸಾಕು ರೈತರು ಜಮೀನುಗಳ ಕೆಲಸವನ್ನು ಬದಿಗೊತ್ತಿ ಗೊಬ್ಬರ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಸಕಾಲಕ್ಕೆ ಮಳೆಯಾದ ಹಿನ್ನೆಲೆಯಲ್ಲಿ ಬೆಳಗಳಿಗೆ ಯೂರಿಯಾ ಅವಶ್ಯಕತೆ ಇದೆ. ಆದರೆ ಯೂರಿಯಾ ಕೊರತೆ ಉಂಟಾಗಿರುವುದರಿಂದ ಬೆಳೆ ಹಾಳಾದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುವುದೇನೋ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.</p>.<p>ರೈತ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ, ರೈತರ ಬೆನ್ನು ಮುರಿಯುತ್ತಿದೆಯೇ ಹೊರತು ರೈತರ ಹಿತ ಕಾಯುತ್ತಿಲ್ಲ’ ಎಂದು ರೈತರ ಬೇಡಿಕೆಗೆ ತಕ್ಕಂತೆ ಯೂರಿಯಾ ಪೂರೈಸದಿರುವ ಸರ್ಕಾರದ ವಿರುದ್ಧ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸೊಸೈಟಿಗಳು ಹಾಗೂ ರಸಗೊಬ್ಬರ ಅಂಗಡಿಗಳ ಮೂಲಕ ವಿತರಿಸಲು ತಾಲ್ಲೂಕಿಗೆ 80 ಟನ್ ಯೂರಿಯಾ ಹಂಚಿಕೆಯಾಗಿದ್ದು, ಪ್ರತಿಯೊಬ್ಬ ರೈತರಿಗೆ ಒಂದು ಬ್ಯಾಗ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಶ್ಯಾಮ ಸುಂದರ್ ಹೇಳಿದರು.</p>.<p>‘ಯೂರಿಯಾ ಶೇ 35ರಷ್ಟು ಅನುಕೂಲವಾದರೆ ನ್ಯಾನೋ ಯೂರಿಯಾ ಸಿಂಪಡಣೆಯಿಂದ ಶೇ 80ರಷ್ಟು ಅನುಕೂಲವಾಗುವುದು. ಹೀಗಾಗಿ ರೈತರು ತಮ್ಮ ಬೆಳೆಗಳಿಗೆ ಹೆಚ್ಚಿನ ಅನುಕೂಲವಾಗುವಂತಹ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಒತ್ತು ನೀಡಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ತಾಲ್ಲೂಕಿನಾದ್ಯಂತ ಸೊಸೈಟಿಗಳಿಗೆ ಹಾಗೂ ರಸಗೊಬ್ಬರ ಮಳಿಗೆಗಳಿಗೆ ಯೂರಿಯಾ ಗೊಬ್ಬರ ಬಂದಿದೆ ಎಂದು ಗೊತ್ತಾದರೆ ಸಾಕು ರೈತರು ಜಮೀನುಗಳ ಕೆಲಸವನ್ನು ಬದಿಗೊತ್ತಿ ಗೊಬ್ಬರ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಸಕಾಲಕ್ಕೆ ಮಳೆಯಾದ ಹಿನ್ನೆಲೆಯಲ್ಲಿ ಬೆಳಗಳಿಗೆ ಯೂರಿಯಾ ಅವಶ್ಯಕತೆ ಇದೆ. ಆದರೆ ಯೂರಿಯಾ ಕೊರತೆ ಉಂಟಾಗಿರುವುದರಿಂದ ಬೆಳೆ ಹಾಳಾದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುವುದೇನೋ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.</p>.<p>ರೈತ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ, ರೈತರ ಬೆನ್ನು ಮುರಿಯುತ್ತಿದೆಯೇ ಹೊರತು ರೈತರ ಹಿತ ಕಾಯುತ್ತಿಲ್ಲ’ ಎಂದು ರೈತರ ಬೇಡಿಕೆಗೆ ತಕ್ಕಂತೆ ಯೂರಿಯಾ ಪೂರೈಸದಿರುವ ಸರ್ಕಾರದ ವಿರುದ್ಧ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸೊಸೈಟಿಗಳು ಹಾಗೂ ರಸಗೊಬ್ಬರ ಅಂಗಡಿಗಳ ಮೂಲಕ ವಿತರಿಸಲು ತಾಲ್ಲೂಕಿಗೆ 80 ಟನ್ ಯೂರಿಯಾ ಹಂಚಿಕೆಯಾಗಿದ್ದು, ಪ್ರತಿಯೊಬ್ಬ ರೈತರಿಗೆ ಒಂದು ಬ್ಯಾಗ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಶ್ಯಾಮ ಸುಂದರ್ ಹೇಳಿದರು.</p>.<p>‘ಯೂರಿಯಾ ಶೇ 35ರಷ್ಟು ಅನುಕೂಲವಾದರೆ ನ್ಯಾನೋ ಯೂರಿಯಾ ಸಿಂಪಡಣೆಯಿಂದ ಶೇ 80ರಷ್ಟು ಅನುಕೂಲವಾಗುವುದು. ಹೀಗಾಗಿ ರೈತರು ತಮ್ಮ ಬೆಳೆಗಳಿಗೆ ಹೆಚ್ಚಿನ ಅನುಕೂಲವಾಗುವಂತಹ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಒತ್ತು ನೀಡಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>