ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು, ಶಿಸ್ತಿನಿಂದ ಸಾಲಿನಲ್ಲಿ ನಿಂತುಕೊಂಡು ಲಸಿಕೆ ಪಡೆದರು. ಇದಕ್ಕೂ ಮುನ್ನ ನಡೆದ ಲಸಿಕೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಬಿ.ಜಿ. ಕನಕೇಶಮೂರ್ತಿ, ‘ಕೋವಿಡ್–19 ಅಪಾಯದಿಂದ ಪಾರಾಗಲು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಲಸಿಕೆ ಸಹಕಾರಿ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.