ಹೊಸಪೇಟೆ: ‘ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ (ಹಂಪಿ ಜೂ) ಮಂಗಳವಾರ (ಅ. 19) ಈದ್ ಮಿಲಾದ್ ರಜಾ ದಿನವೂ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ’ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್. ಕಿರಣ್ ಕುಮಾರ್ ತಿಳಿಸಿದ್ದಾರೆ.
‘ಪ್ರತಿ ಮಂಗಳವಾರ ಉದ್ಯಾನಕ್ಕೆ ರಜೆ ಇರುತ್ತದೆ. ಆದರೆ, ಆ ದಿನ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ಕೊಡುವ ಸಾಧ್ಯತೆ ಇರುವುದರಿಂದ ತೆರೆದಿಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.