<p><strong>ಹೊಸಪೇಟೆ</strong> (ವಿಜಯನಗರ): ‘ವಾಲ್ಮೀಕಿ ನಾಯಕರ ಸಮಾಜದವರು ಬಹಳ ಬಡತನದಿಂದ ಮೇಲೆ ಬಂದವರು. ಇನ್ನೂ 20ರಿಂದ 25 ವರ್ಷಗಳ ಕಾಲ ಅವರಿಗೆ ಸರ್ಕಾರದಿಂದ ಆರ್ಥಿಕ ನೆರವಿನ ಅಗತ್ಯವಿದೆ, ಅದರ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡುತ್ತೇನೆ’ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.</p>.<p>ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ವಾಲ್ಮೀಕಿ ಸಮುದಾಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಸಮುದಾಯದವರು ಸದ್ಭಳಕೆ ಪಡಿಸಿಕೊಳ್ಳಬೇಕು. ಕುರುಬ, ಇತರ ವರ್ಗದವರು ಸಹ ಹಿಂದುಳಿದವರಿದ್ದು, ಅವರು ಸಹ ಬೇಡಿಕೆ ಮುಂದಿಡುವುದರಲ್ಲಿ ತಪ್ಪಿಲ್ಲ. ಸರ್ಕಾರ ಇದೆಲ್ಲವನ್ನೂ ನಿಭಾಯಿಸುವ ವಿಶ್ವಾಸ ಇದೆ’ ಎಂದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಾಧ್ಯಾಪಕರು ಮತ್ತು ಸದಸ್ಯ ಸಿ.ಬಿ.ಚಿಲ್ಕರಾಗಿ ರವರು ಉಪನ್ಯಾಸ ನೀಡಿದರು.</p>.<p>ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವೈಭವ, ನವೀನ.ಎಂ.ಬಿ. ರವರಿಗೆ ಜಡಗ ಮತ್ತು ಬಾಲ ಯೋಜನೆಯಡಿ ₹1 ಲಕ್ಷ ಪ್ರೋತ್ಸಾಹಧನ ನೀಡಲಾಯಿತು. ದೇವದಾಸಿ ಮಕ್ಕಳ ವಿವಾಹವಾದ ದಂಪತಿಗಳು ಹೊಸಪೇಟೆ ತಾಲೂಕಿನ ಪಿ.ಅಶ್ವಿನಿ ಗಂಡ ಎನ್.ರಮೇಶ್, ಕೂಡ್ಲಿಗಿ ತಾಲೂಕಿನ ಡಿ.ಹುಲಿಗೆಮ್ಮ ಗಂಡ ಎನ್.ಅಜ್ಜಯ್ಯ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಹೆಚ್.ಯಮುನಕ್ಕ ಗಂಡ ಶಿವರಾಜ ಇವರಿಗೆ ತಲಾ 5 ಲಕ್ಷ ರೂ.ಗಳು ದೇವದಾಸಿ ಮಕ್ಕಳ ವಿವಾಹ ಪ್ರೋತ್ಸಾಹ ಧನ ಬಾಂಡ್ ನ್ನು ವಿತರಿಸಲಾಯಿತು.</p>.<p>ಜಿಲ್ಲಾಮಟ್ಟದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಗೌರವಿಸಿ ಸನ್ಮಾನಿಸಲಾಯಿತು.</p>.<p>ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಂ ಷಾ, ಎಸ್ಪಿ ಎಸ್.ಜಾಹ್ನವಿ, ಎಡಿಸಿ ಇ.ಬಾಲಕೃಷ್ಣಪ್ಪ, ಡಿಸಿಎಫ್ ಎಚ್.ಅನುಪಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong> (ವಿಜಯನಗರ): ‘ವಾಲ್ಮೀಕಿ ನಾಯಕರ ಸಮಾಜದವರು ಬಹಳ ಬಡತನದಿಂದ ಮೇಲೆ ಬಂದವರು. ಇನ್ನೂ 20ರಿಂದ 25 ವರ್ಷಗಳ ಕಾಲ ಅವರಿಗೆ ಸರ್ಕಾರದಿಂದ ಆರ್ಥಿಕ ನೆರವಿನ ಅಗತ್ಯವಿದೆ, ಅದರ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡುತ್ತೇನೆ’ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.</p>.<p>ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ವಾಲ್ಮೀಕಿ ಸಮುದಾಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಸಮುದಾಯದವರು ಸದ್ಭಳಕೆ ಪಡಿಸಿಕೊಳ್ಳಬೇಕು. ಕುರುಬ, ಇತರ ವರ್ಗದವರು ಸಹ ಹಿಂದುಳಿದವರಿದ್ದು, ಅವರು ಸಹ ಬೇಡಿಕೆ ಮುಂದಿಡುವುದರಲ್ಲಿ ತಪ್ಪಿಲ್ಲ. ಸರ್ಕಾರ ಇದೆಲ್ಲವನ್ನೂ ನಿಭಾಯಿಸುವ ವಿಶ್ವಾಸ ಇದೆ’ ಎಂದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಾಧ್ಯಾಪಕರು ಮತ್ತು ಸದಸ್ಯ ಸಿ.ಬಿ.ಚಿಲ್ಕರಾಗಿ ರವರು ಉಪನ್ಯಾಸ ನೀಡಿದರು.</p>.<p>ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವೈಭವ, ನವೀನ.ಎಂ.ಬಿ. ರವರಿಗೆ ಜಡಗ ಮತ್ತು ಬಾಲ ಯೋಜನೆಯಡಿ ₹1 ಲಕ್ಷ ಪ್ರೋತ್ಸಾಹಧನ ನೀಡಲಾಯಿತು. ದೇವದಾಸಿ ಮಕ್ಕಳ ವಿವಾಹವಾದ ದಂಪತಿಗಳು ಹೊಸಪೇಟೆ ತಾಲೂಕಿನ ಪಿ.ಅಶ್ವಿನಿ ಗಂಡ ಎನ್.ರಮೇಶ್, ಕೂಡ್ಲಿಗಿ ತಾಲೂಕಿನ ಡಿ.ಹುಲಿಗೆಮ್ಮ ಗಂಡ ಎನ್.ಅಜ್ಜಯ್ಯ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಹೆಚ್.ಯಮುನಕ್ಕ ಗಂಡ ಶಿವರಾಜ ಇವರಿಗೆ ತಲಾ 5 ಲಕ್ಷ ರೂ.ಗಳು ದೇವದಾಸಿ ಮಕ್ಕಳ ವಿವಾಹ ಪ್ರೋತ್ಸಾಹ ಧನ ಬಾಂಡ್ ನ್ನು ವಿತರಿಸಲಾಯಿತು.</p>.<p>ಜಿಲ್ಲಾಮಟ್ಟದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಗೌರವಿಸಿ ಸನ್ಮಾನಿಸಲಾಯಿತು.</p>.<p>ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಂ ಷಾ, ಎಸ್ಪಿ ಎಸ್.ಜಾಹ್ನವಿ, ಎಡಿಸಿ ಇ.ಬಾಲಕೃಷ್ಣಪ್ಪ, ಡಿಸಿಎಫ್ ಎಚ್.ಅನುಪಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>