<p><strong>ಹೊಸಪೇಟೆ (ವಿಜಯನಗರ):</strong> ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ನಾಯಕ ಸಮುದಾಯದ ಕುರಿತು ಅವಹೇಳನಕಾರಿ ಹೇ ಳಿಕೆ ನೀಡಿರುವುದನ್ನು ವಿರೋಧಿಸಿ ಹೊಸಪೇಟೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.</p><p>ರಮೇಶ್ ಕತ್ತಿ ಅವರ ಫೊಟೋಕ್ಕೆ ಕತ್ತೆಯ ಮುಝದ ಚಿತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.</p><p>'ರಮೇಶ್ ಕತ್ತಿ ನಮ್ಮ ಸಮುದಾಯದ ಜಾತಿ ನಿಂದನೆ ಮಾಡಿದ್ದಾರೆ.</p><p>ಅವರ ವಿರುದ್ಧ ಈ ಕೂಡಲೇ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು' ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p><p>ಜಾತಿ ನಿಂದನೆ ಪ್ರಕರಣ ದಾಖಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.</p><p>ಈಗಾಗಲೇ ನಾನಾ ಕಡೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p><p>ಕೊನೆಯಲ್ಲಿ ವಿಜಯನಗರ ಎಸ್ಪಿ ಎಸ್.ಜಾಹ್ನವಿ ಅವರ ಮೂಲಕ ಗೃಹಸಚಿವ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಕಳುಹಿಸಿಕೊಡಲಾಯಿತು.</p><p>ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ, ಕಾರ್ಯದರ್ಶಿ ಶ್ರೀನಿವಾಸ ದೇವರಮನಿ, ರೈತಸಂಘದ ಮುಖಂಡ ನಾಗರಾಜ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ನಾಯಕ ಸಮುದಾಯದ ಕುರಿತು ಅವಹೇಳನಕಾರಿ ಹೇ ಳಿಕೆ ನೀಡಿರುವುದನ್ನು ವಿರೋಧಿಸಿ ಹೊಸಪೇಟೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.</p><p>ರಮೇಶ್ ಕತ್ತಿ ಅವರ ಫೊಟೋಕ್ಕೆ ಕತ್ತೆಯ ಮುಝದ ಚಿತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.</p><p>'ರಮೇಶ್ ಕತ್ತಿ ನಮ್ಮ ಸಮುದಾಯದ ಜಾತಿ ನಿಂದನೆ ಮಾಡಿದ್ದಾರೆ.</p><p>ಅವರ ವಿರುದ್ಧ ಈ ಕೂಡಲೇ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು' ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p><p>ಜಾತಿ ನಿಂದನೆ ಪ್ರಕರಣ ದಾಖಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.</p><p>ಈಗಾಗಲೇ ನಾನಾ ಕಡೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p><p>ಕೊನೆಯಲ್ಲಿ ವಿಜಯನಗರ ಎಸ್ಪಿ ಎಸ್.ಜಾಹ್ನವಿ ಅವರ ಮೂಲಕ ಗೃಹಸಚಿವ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಕಳುಹಿಸಿಕೊಡಲಾಯಿತು.</p><p>ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ, ಕಾರ್ಯದರ್ಶಿ ಶ್ರೀನಿವಾಸ ದೇವರಮನಿ, ರೈತಸಂಘದ ಮುಖಂಡ ನಾಗರಾಜ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>