‘ತರಕಾರಿ, ಹಣ್ಣು ಹೆಚ್ಚು ದಿನ ಸಂಗ್ರಹಿಸಿ ಇಡಲು ಆಗುವುದಿಲ್ಲ. ನಿತ್ಯ ಹೇಳಿಕೊಳ್ಳುವಂತಹ ವ್ಯಾಪಾರ ಆಗುತ್ತಿಲ್ಲ. ಅನೇಕರು ಆಯಾ ಬಡಾವಣೆಗಳಿಗೆ ಹೋಗಿ ತರಕಾರಿ, ಹಣ್ಣು ಮಾರಾಟ ಮಾಡುತ್ತಿದ್ದಾರೆ. ಹೊರಗೆ ಬಂದರೆ ಕೊರೊನಾ ಬರುತ್ತದೆ ಎಂಬ ಭಯದಲ್ಲಿ ಜನ ಖರೀದಿಗೆ ಬರುತ್ತಿಲ್ಲ. ಇದರಿಂದಲೂ ವ್ಯಾಪಾರಕ್ಕೆ ಹಿನ್ನಡೆ ಉಂಟಾಗುತ್ತಿದೆ’ ಎಂದು ಮಾವಿನ ಹಣ್ಣುಗಳ ವ್ಯಾಪಾರಿ ಅಕ್ಬರ್ ತಿಳಿಸಿದರು.