ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂಯೇತರರರಿಗೆ ವ್ಯಾಪಾರಕ್ಕೆ ಅವಕಾಶ ಬೇಡ: ವಿಎಚ್‌ಪಿ, ಬಜರಂಗದಳ ಮನವಿ

Last Updated 28 ಮಾರ್ಚ್ 2022, 12:18 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ); ಜಿಲ್ಲೆಯಾದ್ಯಂತ ನಡೆಯಲಿರುವ ಜಾತ್ರೆ, ರಥೋತ್ಸವ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಬಾರದು ಎಂದು ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗ ದಳ ಜಿಲ್ಲಾಡಳಿತವನ್ನು ಒತ್ತಾಯಿಸಿವೆ.

ಈ ಸಂಬಂಧ ಎರಡೂ ಸಂಘಟನೆಗಳು ಸೋಮವಾರ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿವೆ.

ದೇವಸ್ಥಾನದ ಪರಿಸರದಲ್ಲಿ ಹಿಂದೂಗಳಲ್ಲದವರಿಗೆ ಮಳಿಗೆ, ವಸತಿಗೃಹ, ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕೊಡಬಾರದು. ಈಗಾಗಲೇ ಅನುಮತಿ ಕೊಟ್ಟಿದ್ದಲ್ಲಿ ರದ್ದುಪಡಿಸಬೇಕು. ಹಿಂದೂ ದೇವರುಗಳಲ್ಲಿ ಶ್ರದ್ಧೆ, ಭಕ್ತಿಯಿಲ್ಲದೆ ಅಪಚಾರವೆಸಗಬಹುದು. ಶಾಂತಿ ಕದಡಬಹುದು ಎಂದು ತಿಳಿಸಿದ್ದಾರೆ.

ಮುಖಂಡರಾದ ನರಸಿಂಹಮೂರ್ತಿ, ಎಂ. ರಾಜ, ಕೊಟ್ರೇಶ, ಎನ್‌. ಪರಶುರಾಮ, ನಾಗರಾಜ, ಯಮನೂರ ನಾಯ್ಕ, ಉಮೇಶ, ರವಿಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT