<p>ಹೂವಿನಹಡಗಲಿ: ಪಟ್ಟಣದಲ್ಲಿ ಬೀದಿ ದೀಪಗಳನ್ನು ಅಳವಡಿಸುವ ‘ಕತ್ತಲೆಯಿಂದ ಬೆಳಕಿನೆಡೆಗೆ’ ಯೋಜನೆಗೆ ಶಾಸಕ ಎಲ್.ಕೃಷ್ಣನಾಯ್ಕ ಮಂಗಳವಾರ ಚಾಲನೆ ನೀಡಿದರು.</p>.<p>ಶಾಸ್ತ್ರಿ ವೃತ್ತದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಅವರು, ‘ಹಡಗಲಿ ವಿಧಾನಸಭಾ ಕ್ಷೇತ್ರದಾದ್ಯಂತ ಐದು ವರ್ಷದ ವಾರಂಟಿಯ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತಿದೆ. ಪಟ್ಟಣ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 18 ಸಾವಿರ ಬೀದಿದೀಪದ ಕಂಬಗಳಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ₹4 ಕೋಟಿ ಮೊತ್ತದಲ್ಲಿ 6,500 ಎಲ್ಇಡಿ ಬೀದಿದೀಪಗಳನ್ನು ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಪಟ್ಟಣದಲ್ಲಿ 4,000 ಬೀದಿದೀಪ ಕಂಬಗಳಿದ್ದು, ಎರಡು ಸಾವಿರ ಬೀದಿದೀಪ ಅಳವಡಿಸುತ್ತೇವೆ. ಸಂಜೆಯಾಗುತ್ತಲೇ ಸ್ವಯಂಚಾಲಿತವಾಗಿ ಹೊತ್ತಿಕೊಳ್ಳುವ ಬೀದಿದೀಪಗಳು ಬೆಳಿಗ್ಗೆ ಆರಲಿವೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದ್ದು, ಕ್ಷೇತ್ರದ ಬೀದಿದೀಪ ಸಮಸ್ಯೆ ನಿವಾರಿಸಲು ವಿಶೇಷವಾಗಿ ಈ ಯೋಜನೆ ರೂಪಿಸಿದ್ದೇವೆ’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ್ ಬೀ, ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ, ಸದಸ್ಯರಾದ ವಾರದ ಗೌಸ್ ಮೊಹಿದ್ದೀನ್, ಎಸ್.ತಿಮ್ಮಣ್ಣ, ಎಸ್.ಶಫಿವುಲ್ಲಾ, ಚಂದ್ರನಾಯ್ಕ, ವಿಶಾಲಾಕ್ಷಮ್ಮ ಅಂಗಡಿ, ಸಾಂತಮ್ಮ, ಗುತ್ತಿಗೆದಾರ ಮಂಜಪ್ಪ ಹರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ಪಟ್ಟಣದಲ್ಲಿ ಬೀದಿ ದೀಪಗಳನ್ನು ಅಳವಡಿಸುವ ‘ಕತ್ತಲೆಯಿಂದ ಬೆಳಕಿನೆಡೆಗೆ’ ಯೋಜನೆಗೆ ಶಾಸಕ ಎಲ್.ಕೃಷ್ಣನಾಯ್ಕ ಮಂಗಳವಾರ ಚಾಲನೆ ನೀಡಿದರು.</p>.<p>ಶಾಸ್ತ್ರಿ ವೃತ್ತದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಅವರು, ‘ಹಡಗಲಿ ವಿಧಾನಸಭಾ ಕ್ಷೇತ್ರದಾದ್ಯಂತ ಐದು ವರ್ಷದ ವಾರಂಟಿಯ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತಿದೆ. ಪಟ್ಟಣ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 18 ಸಾವಿರ ಬೀದಿದೀಪದ ಕಂಬಗಳಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ₹4 ಕೋಟಿ ಮೊತ್ತದಲ್ಲಿ 6,500 ಎಲ್ಇಡಿ ಬೀದಿದೀಪಗಳನ್ನು ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಪಟ್ಟಣದಲ್ಲಿ 4,000 ಬೀದಿದೀಪ ಕಂಬಗಳಿದ್ದು, ಎರಡು ಸಾವಿರ ಬೀದಿದೀಪ ಅಳವಡಿಸುತ್ತೇವೆ. ಸಂಜೆಯಾಗುತ್ತಲೇ ಸ್ವಯಂಚಾಲಿತವಾಗಿ ಹೊತ್ತಿಕೊಳ್ಳುವ ಬೀದಿದೀಪಗಳು ಬೆಳಿಗ್ಗೆ ಆರಲಿವೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದ್ದು, ಕ್ಷೇತ್ರದ ಬೀದಿದೀಪ ಸಮಸ್ಯೆ ನಿವಾರಿಸಲು ವಿಶೇಷವಾಗಿ ಈ ಯೋಜನೆ ರೂಪಿಸಿದ್ದೇವೆ’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ್ ಬೀ, ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ, ಸದಸ್ಯರಾದ ವಾರದ ಗೌಸ್ ಮೊಹಿದ್ದೀನ್, ಎಸ್.ತಿಮ್ಮಣ್ಣ, ಎಸ್.ಶಫಿವುಲ್ಲಾ, ಚಂದ್ರನಾಯ್ಕ, ವಿಶಾಲಾಕ್ಷಮ್ಮ ಅಂಗಡಿ, ಸಾಂತಮ್ಮ, ಗುತ್ತಿಗೆದಾರ ಮಂಜಪ್ಪ ಹರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>