<p><strong>ಹೊಸಪೇಟೆ</strong> (ವಿಜಯನಗರ): ತಾಲ್ಲೂಕಿನ ಕಮಲಾಪುರ ಹೋಬಳಿಯ ಸೀತಾರಾಮ ತಾಂಡಾದ ನಿವಾಸಿ, ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಗುರುಪ್ರಸಾದ್ (30) ಅವರ ಶವ ಕಮಲಾಪುರದ ಎಲ್ಎಲ್ಸಿ ಕಾಲುವೆಯ ಎಚ್ಪಿಸಿ ಸೇತುವೆ ಬಳಿ ಮಂಗಳವಾರ ಪತ್ತೆಯಾಗಿದ್ದು, ಆತನ ಸಾವಿನ ಕುರಿತಂತೆ ತಂದೆ ಸಂಶಯ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಗುರುಪ್ರಸಾದ್ ಅವರ ತಂದೆ ಎಲ್.ಕೃಷ್ಣ ನಾಯ್ಕ್ ಅವರು ಕಮಲಾಪುರ ಠಾಣೆಗೆ ದೂರು ನೀಡಿದ್ದು, ಏಪ್ರಿಲ್ 14ರಂದು ಬೆಳಿಗ್ಗೆ 10.30ರ ವೇಳೆಗೆ ಮನೆಯಿಂದ ಹೊರಗೆ ಹೋದವರು ಮರಳಿ ಬಂದಿಲ್ಲ, ಸಾವಿನ ಬಗ್ಗೆ ಸಂಶಯವಿದೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಕೋರಿದ್ದಾರೆ.</p>.<p>14ರಂದು ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಇದೇ ಯುವಕ ಕುಣಿದು ಕುಪ್ಪಳಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>‘ಮೃತದೇಹದ ಕೆಲವು ಭಾಗಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ, ಅದುವರೆಗೆ ಏನೂ ಹೇಳಲಾಗದು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong> (ವಿಜಯನಗರ): ತಾಲ್ಲೂಕಿನ ಕಮಲಾಪುರ ಹೋಬಳಿಯ ಸೀತಾರಾಮ ತಾಂಡಾದ ನಿವಾಸಿ, ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಗುರುಪ್ರಸಾದ್ (30) ಅವರ ಶವ ಕಮಲಾಪುರದ ಎಲ್ಎಲ್ಸಿ ಕಾಲುವೆಯ ಎಚ್ಪಿಸಿ ಸೇತುವೆ ಬಳಿ ಮಂಗಳವಾರ ಪತ್ತೆಯಾಗಿದ್ದು, ಆತನ ಸಾವಿನ ಕುರಿತಂತೆ ತಂದೆ ಸಂಶಯ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಗುರುಪ್ರಸಾದ್ ಅವರ ತಂದೆ ಎಲ್.ಕೃಷ್ಣ ನಾಯ್ಕ್ ಅವರು ಕಮಲಾಪುರ ಠಾಣೆಗೆ ದೂರು ನೀಡಿದ್ದು, ಏಪ್ರಿಲ್ 14ರಂದು ಬೆಳಿಗ್ಗೆ 10.30ರ ವೇಳೆಗೆ ಮನೆಯಿಂದ ಹೊರಗೆ ಹೋದವರು ಮರಳಿ ಬಂದಿಲ್ಲ, ಸಾವಿನ ಬಗ್ಗೆ ಸಂಶಯವಿದೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಕೋರಿದ್ದಾರೆ.</p>.<p>14ರಂದು ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಇದೇ ಯುವಕ ಕುಣಿದು ಕುಪ್ಪಳಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>‘ಮೃತದೇಹದ ಕೆಲವು ಭಾಗಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ, ಅದುವರೆಗೆ ಏನೂ ಹೇಳಲಾಗದು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>