<p><strong>ಹೊಸಪೇಟೆ (ವಿಜಯನಗರ):</strong> ನೂತನ ವಿಜಯನಗರ ಜಿಲ್ಲೆ ರಚನೆಯಾಗಿ ಮೂರು ವರ್ಷ ತುಂಬುತ್ತಿದ್ದು, ಜಿಲ್ಲೆಯ ಪ್ರಗತಿಗೆ ವೇಗ ನೀಡುವ ಉದ್ದೇಶದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭವಾಗಿದೆ.</p><p>ಬಳ್ಳಾರಿ ಜಿಲ್ಲೆ ತೋರಣಗಲ್ ನ ಜಿಂದಾಲ್ ಕಂಪನಿಯ ಆವರಣದಲ್ಲಿ ಬೆಳಿಗ್ಗೆ ರಾಜ್ಯ ಮಟ್ಟದ 10ನೇ ಅಂತರರಾಷ್ಟ್ರೀಯ ಯೋಗ ಶಿಬಿರದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಅವರು ನಗರಕ್ಕೆ ಬಂದು, ಅನಂತಶಯನಗುಡಿಯಲ್ಲಿರುವ ತಮ್ಮ ಸಂಬಂಧಿ ಬಸವರಾಜ ದೇವರಮನಿ ಅವರ ಮನೆಗೆ ತೆರಳಿ ಉಪಾಹಾರ ಸೇವಿಸಿದರು.</p><p>ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಸಿಎಂ ಅವರು ಸಾರ್ವಜನಿಕರ ಅಹವಾಲು ಆಲಿಸಿದರು. ರೈತ ಸಂಘಟನೆಗಳು, ಸಿಪಿಎಂ, ಅಂಗನವಾಡಿ ಸಂಘಟನೆಗಳು, ಸರ್ಕಾರಿ ನೌಕರರ ಸಂಘಟನೆಗಳ ಸಹಿತ ಸುಮಾರು 30 ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.</p><p>ಬಳಿಕ ಕೆಡಿಪಿ ಸಭೆಯತ್ತ ತೆರಳಿದ ಸಿದ್ದರಾಮಯ್ಯ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಕೆಡಿಪಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವುದಾಗಿ ಅವರು ಈ ಮೊದಲೇ ಪ್ರಕಟಿಸಿದ್ದರು.</p><p>ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿಗಳಾದ ಬಸವರಾಜ ರಾಯರೆಡ್ಡಿ, ಗೋವಿಂದರಾಜ್, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಹಲವು ಶಾಸಕರು, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಪಾಲ್ಗೊಂಡಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ ಗೈರಾಗಿದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನೂತನ ವಿಜಯನಗರ ಜಿಲ್ಲೆ ರಚನೆಯಾಗಿ ಮೂರು ವರ್ಷ ತುಂಬುತ್ತಿದ್ದು, ಜಿಲ್ಲೆಯ ಪ್ರಗತಿಗೆ ವೇಗ ನೀಡುವ ಉದ್ದೇಶದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭವಾಗಿದೆ.</p><p>ಬಳ್ಳಾರಿ ಜಿಲ್ಲೆ ತೋರಣಗಲ್ ನ ಜಿಂದಾಲ್ ಕಂಪನಿಯ ಆವರಣದಲ್ಲಿ ಬೆಳಿಗ್ಗೆ ರಾಜ್ಯ ಮಟ್ಟದ 10ನೇ ಅಂತರರಾಷ್ಟ್ರೀಯ ಯೋಗ ಶಿಬಿರದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಅವರು ನಗರಕ್ಕೆ ಬಂದು, ಅನಂತಶಯನಗುಡಿಯಲ್ಲಿರುವ ತಮ್ಮ ಸಂಬಂಧಿ ಬಸವರಾಜ ದೇವರಮನಿ ಅವರ ಮನೆಗೆ ತೆರಳಿ ಉಪಾಹಾರ ಸೇವಿಸಿದರು.</p><p>ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಸಿಎಂ ಅವರು ಸಾರ್ವಜನಿಕರ ಅಹವಾಲು ಆಲಿಸಿದರು. ರೈತ ಸಂಘಟನೆಗಳು, ಸಿಪಿಎಂ, ಅಂಗನವಾಡಿ ಸಂಘಟನೆಗಳು, ಸರ್ಕಾರಿ ನೌಕರರ ಸಂಘಟನೆಗಳ ಸಹಿತ ಸುಮಾರು 30 ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.</p><p>ಬಳಿಕ ಕೆಡಿಪಿ ಸಭೆಯತ್ತ ತೆರಳಿದ ಸಿದ್ದರಾಮಯ್ಯ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಕೆಡಿಪಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವುದಾಗಿ ಅವರು ಈ ಮೊದಲೇ ಪ್ರಕಟಿಸಿದ್ದರು.</p><p>ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿಗಳಾದ ಬಸವರಾಜ ರಾಯರೆಡ್ಡಿ, ಗೋವಿಂದರಾಜ್, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಹಲವು ಶಾಸಕರು, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಪಾಲ್ಗೊಂಡಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ ಗೈರಾಗಿದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>