ಇದಕ್ಕೂ ಮುನ್ನ ಸರ್ಕಾರವು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರನ್ನು ಕೊಪ್ಪಳದಿಂದ ವಿಜಯನಗರಕ್ಕೆ ಹಾಗೂ ಮುಜರಾಯಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ವಿಜಯನಗರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಈಗ ಆದೇಶ ರದ್ದುಪಡಿಸಿರುವುದರಿಂದ ಇಬ್ಬರೂ ಸಚಿವರು ಹಿಂದಿನ ಜಿಲ್ಲೆಯ ಉಸ್ತುವಾರಿಗಳಾಗಿ ಮುಂದುವರೆಯಲಿದ್ದಾರೆ.