‘ಸ್ವಾತಂತ್ರ್ಯ ಬಂದಾಗಿನಿಂದಲೂ ಬಳ್ಳಾರಿಗೆ ವಿಶೇಷ ಸ್ಥಾನ ಇದೆ. ಎಲ್ಲರೂ ಒಂದೇ ಕುಟುಂಬವಾಗಿ ಬಾಳಬೇಕು. ಎರಡು ಜಿಲ್ಲೆಗಳು ಎರಡು ಕಣ್ಣುಗಳಿದ್ದಂತೆ. ಜಿಲ್ಲೆ ಘೋಷಣೆಯಾದ ನಂತರ ಅದರ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ. ಅಭಿವೃದ್ಧಿಗಾಗಿ ಸರ್ಕಾರ ಜಿಲ್ಲೆ ಮಾಡಿದೆ. ಆದರೆ, ಇನ್ನೊಂದು ಯಾದಗಿರಿ, ರಾಮನಗರ ಜಿಲ್ಲೆಗಳಂತೆ ಅಭಿವೃದ್ಧಿ ಆಗದೇ ಇರಬಾರದು. ಯಾರು ಕೂಡ ಈ ವಿಷಯವನ್ನು ಪ್ರತಿಷ್ಠೆಗೆ ತೆಗೆದುಕೊಳ್ಳಬಾರದು’ ಎಂದು ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.