ಬುಕ್ ಬ್ಯಾಂಕ್ ನಲ್ಲಿ ಸಂಗ್ರಹಿಸಿ ಇಡಲಾಗಿದ್ದ ಹಳೆಯ ಪುಸ್ತಕಗಳನ್ನು ವಿತರಿಸಲಾಯಿತು. ಮೊದಲ ದಿನವೇ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಬಂದದ್ದು ವಿಶೇಷ. ಅವಳಿ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿಯಲ್ಲಿ ಕೆಂಡದಂತಹ ಬಿಸಿಲು ಇದ್ದು, ಜೂನ್ ನಲ್ಲಿ ಶಾಲೆ ಆರಂಭಿಸಬೇಕು ಎಂಬ ಹಕ್ಕೊತ್ತಾಯವನ್ನು ಹಲವು ಸಂಘಟನೆಗಳು ಮಾಡಿದ್ದವು. ಆದರೆ, ಜಿಲ್ಲಾಡಳಿತ ಅದನ್ನು ಪರಿಗಣಿಸಿಲ್ಲ. ರಾಜ್ಯದ ಇತರೆ ಕಡೆಗಳಂತೆ ಜಿಲ್ಲೆಯಲ್ಲೂ ಶಾಲೆಗಳನ್ನು ಪ್ರಾರಂಭಿಸಿದೆ.