<p><strong>ಮರಿಯಮ್ಮನಹಳ್ಳಿ</strong>: ‘ಫಾರಂ-3 ವಿಚಾರದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ, ಅಲೆದಾಡಿಸುವುದು ಮತ್ತು ಮಧ್ಯವರ್ತಿಗಳ ಹಾವಳಿ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಕೆ.ನೇಮರಾಜನಾಯ್ಕ ಎಚ್ಚರಿಸಿದರು.</p>.<p>ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕುಂದುಕೊರತೆ ಸಭೆಯಲ್ಲಿ ಅಧ್ಯಕ್ಷತೆವಹಿಸಿದ್ದ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ನಂತರ ಅವರು ಮಾತನಾಡಿದರು.</p>.<p>ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಯಾರದೋ ಜಾಗಕ್ಕೆ ಮೊತ್ತೊಬ್ಬರಿಗೆ ಫಾರಂ-3 ಕೊಟ್ಟಿರುವ ಬಗ್ಗೆ ಹಾಗೂ ಕಳೆದ 9 ತಿಂಗಳಿನಿಂದ ನಿಂತಲ್ಲೇ ನಿಂತ ಕಸ ಸಾಗಿಸುವ ಆಟೋಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದಿರುವುದು, ಸಾರ್ವಜನಿಕರೊಂದಿಗೆ ಅಗೌರವವಾಗಿ ನಡೆದುಕೊಳ್ಳುವುದು ಹಾಗೂ ಸ್ವಚ್ಛತೆಯ ಬಗ್ಗೆ ದೂರುಗಳ ಕೇಳಿ ಬಂದಿದ್ದು, ಅಂತಹವರಿಗೆ ಶೋಕಾಸ್ ನೋಟಿಸ್ ನೀಡುವಂತೆ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳಿಗೆ ಸೂಚಿಸಿದರು.</p>.<p>ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಅಮೃತ-2 ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಯೋಜನೆಯ ಕಾಮಗಾರಿಗೆ ಯಾರೇ ಅಡ್ಡಪಡಿಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್, ಜೆಸ್ಕಾಂ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು. ತಿಂಗಳೊಳಗೆ ಕೆಲಸ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಬಸ್ ನಿಲ್ದಾಣದಲ್ಲಿನ ಆಟೋ ಚಾಲಕರ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳನ್ನು ಆಲಿಸಿದ ಅವರು, ಆಟೋ ಚಾಲಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಜೊತೆಗೆ ಈಗಾಗಲೇ ಅಂಗಡಿಗಳಿಗೆ ಟೆಂಡರ್ ಪಡೆದಿದಲ್ಲಿ ಕೂಡಲೇ ಅದನ್ನು ವಾಪಾಸು ಮಾಡುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಆದಿಮನಿ ಹುಸೇನ್ಬಾಷಾ, ಉಪಾಧ್ಯಕ್ಷೆ ಆರ್.ಲಕ್ಷ್ಮಿ ಮಂಜುನಾಥ ಸ್ಥಾಯಿ ಸಮಿತಿ ಅಧ್ಯಕ್ಷೆ ಹುಲಗಿಬಾಯಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮನೋಹರ, ಮುಖ್ಯಾಧಿಕಾರಿ ಜಿ.ಕೆ.ಮಲ್ಲೇಶ್, ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><blockquote>ಬಿಎಂಎಂ ಇಸ್ಪಾತ್ ಕಾರ್ಖಾನೆಯಿಂದ ಹೊರ ಸೂಸುವ ದೂಳಿನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕಾರ್ಖಾನೆಗೆ ನೋಟಿಸ್ ನೀಡಬೇಕು.</blockquote><span class="attribution">– ಕೆ.ನೇಮರಾಜನಾಯ್ಕ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ</strong>: ‘ಫಾರಂ-3 ವಿಚಾರದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ, ಅಲೆದಾಡಿಸುವುದು ಮತ್ತು ಮಧ್ಯವರ್ತಿಗಳ ಹಾವಳಿ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಕೆ.ನೇಮರಾಜನಾಯ್ಕ ಎಚ್ಚರಿಸಿದರು.</p>.<p>ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕುಂದುಕೊರತೆ ಸಭೆಯಲ್ಲಿ ಅಧ್ಯಕ್ಷತೆವಹಿಸಿದ್ದ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ನಂತರ ಅವರು ಮಾತನಾಡಿದರು.</p>.<p>ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಯಾರದೋ ಜಾಗಕ್ಕೆ ಮೊತ್ತೊಬ್ಬರಿಗೆ ಫಾರಂ-3 ಕೊಟ್ಟಿರುವ ಬಗ್ಗೆ ಹಾಗೂ ಕಳೆದ 9 ತಿಂಗಳಿನಿಂದ ನಿಂತಲ್ಲೇ ನಿಂತ ಕಸ ಸಾಗಿಸುವ ಆಟೋಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದಿರುವುದು, ಸಾರ್ವಜನಿಕರೊಂದಿಗೆ ಅಗೌರವವಾಗಿ ನಡೆದುಕೊಳ್ಳುವುದು ಹಾಗೂ ಸ್ವಚ್ಛತೆಯ ಬಗ್ಗೆ ದೂರುಗಳ ಕೇಳಿ ಬಂದಿದ್ದು, ಅಂತಹವರಿಗೆ ಶೋಕಾಸ್ ನೋಟಿಸ್ ನೀಡುವಂತೆ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳಿಗೆ ಸೂಚಿಸಿದರು.</p>.<p>ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಅಮೃತ-2 ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಯೋಜನೆಯ ಕಾಮಗಾರಿಗೆ ಯಾರೇ ಅಡ್ಡಪಡಿಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್, ಜೆಸ್ಕಾಂ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು. ತಿಂಗಳೊಳಗೆ ಕೆಲಸ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಬಸ್ ನಿಲ್ದಾಣದಲ್ಲಿನ ಆಟೋ ಚಾಲಕರ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳನ್ನು ಆಲಿಸಿದ ಅವರು, ಆಟೋ ಚಾಲಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಜೊತೆಗೆ ಈಗಾಗಲೇ ಅಂಗಡಿಗಳಿಗೆ ಟೆಂಡರ್ ಪಡೆದಿದಲ್ಲಿ ಕೂಡಲೇ ಅದನ್ನು ವಾಪಾಸು ಮಾಡುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಆದಿಮನಿ ಹುಸೇನ್ಬಾಷಾ, ಉಪಾಧ್ಯಕ್ಷೆ ಆರ್.ಲಕ್ಷ್ಮಿ ಮಂಜುನಾಥ ಸ್ಥಾಯಿ ಸಮಿತಿ ಅಧ್ಯಕ್ಷೆ ಹುಲಗಿಬಾಯಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮನೋಹರ, ಮುಖ್ಯಾಧಿಕಾರಿ ಜಿ.ಕೆ.ಮಲ್ಲೇಶ್, ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><blockquote>ಬಿಎಂಎಂ ಇಸ್ಪಾತ್ ಕಾರ್ಖಾನೆಯಿಂದ ಹೊರ ಸೂಸುವ ದೂಳಿನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕಾರ್ಖಾನೆಗೆ ನೋಟಿಸ್ ನೀಡಬೇಕು.</blockquote><span class="attribution">– ಕೆ.ನೇಮರಾಜನಾಯ್ಕ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>