ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆ: ಕೆರೆಯಲ್ಲಿ ಮುಳುಗಿ ನಾಲ್ವರ ಸಾವು

Last Updated 2 ನವೆಂಬರ್ 2022, 8:37 IST
ಅಕ್ಷರ ಗಾತ್ರ

ಹರಪನಹಳ್ಳಿ (ವಿಜಯನಗರ ಜಿಲ್ಲೆ): ಕೆರೆ ನೋಡಲು ಹೋಗಿದ್ದ ಅಕ್ಕ, ಸಹೋದರ ಸೇರಿದಂತೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಬುಧವಾರ ನಡೆದಿದೆ.

ನಂದಿಬೇವೂರು ತಾಂಡದ ಅಶ್ವಿನಿ ( 17), ಅವರ ಸಹೋದರ ಅಭಿಷೇಕ (14) , ಚೆನ್ನಹಳ್ಳಿ ತಾಂಡದ ಕಾವ್ಯ (19) ಮತ್ತು ತುಂಬಿನಕೇರಿ‌ ತಾಂಡದ ಅಪೂರ್ವ(14) ಮೃತರು.

ಇಬ್ಬರು ವಿದ್ಯಾರ್ಥಿಗಳ ಮೃತದೇಹ‌ ಪತ್ತೆಯಾಗಿದ್ದು, ಗ್ರಾಮದ ಈಜುಪಟುಗಳು ಉಳಿದವರ ಮೃತದೇಹ ಪತ್ತೆ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಸಂಬಂಧಿಕರ ಮನೆಗೆ ಬಂದಿದ್ದ ವಿದ್ಯಾರ್ಥಿಗಳು ತುಂಬಿದ ಕೆರೆ ನೋಡಲು ಹೋಗಿದ್ದಾಗ ಅಭಿಷೇಕ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ, ಆತನ ರಕ್ಷಣೆಗಿಳಿದು ಉಳಿದವರು ನೀರು ಪಾಲಾಗಿದ್ದಾರೆ ಎಂದು ಗೊತ್ತಾಗಿದೆ. ವಿಷಯ ತಿಳಿದು ಕೆರೆ ದಂಡೆಯಲ್ಲಿ ನೂರಾರು ಜನ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT