'ಬಿಗಿ ಕ್ರಮ ಕೈಗೊಳ್ಳುವುದಕ್ಕೆ ಅಭ್ಯಂತರವಿಲ್ಲ. ಆದರೆ, ದಿನಸಿ ಮನೆಗೆ ತೆಗೆದುಕೊಂಡು ಹೋಗಲು ಕಷ್ಟವಾಗುತ್ತದೆ. ಅದರಲ್ಲೂ ನನ್ನಂತಹ ವಯಸ್ಸಾದವರಿಗೆ ಬಹಳ ಸಮಸ್ಯೆ ಆಗುತ್ತದೆ. ಬೆಳಿಗ್ಗೆ ಆರರಿಂದ ಹತ್ತು ಗಂಟೆಯವರೆಗೆ ದ್ವಿಷಕ್ರ ವಾಹನಗಳಲ್ಲಿ ದಿನಸಿ ಕೊಂಡೊಯ್ಯಲು ಅವಕಾಶ ಕಲ್ಪಿಸಬೇಕು. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕ್ರಮ ಜರುಗಿಸಲಿ' ಎಂದು ಇಲ್ಲಿನ ಕಾಲೇಜು ರಸ್ತೆಯಲ್ಲಿ ದಿನಸಿ ಖರೀದಿಸಿ ಮರಳುತ್ತಿದ್ದ ಬಸವೇಶ್ಬರ ಬಡಾವಣೆಯ ನಿವಾಸಿ ಮಲ್ಲಿಕಾರ್ಜುನ ತಿಳಿಸಿದರು.