<p><strong>ಹೊಸಪೇಟೆ</strong>: ಆತ್ಮಹತ್ಯೆ ನಿವಾರಣೆ ಕುರಿತು ಜಾಗೃತಿಯ ಸಂದೇಶ ಸಾರುವ `ಸೆಪ್ಟೆಂಬರ್- 10' ಸಿನಿಮಾ ಆಗಸ್ಟ್ 8ರಂದು ತೆರೆ ಕಾಣಲಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಓಂ ಸಾಯಿ ಪ್ರಕಾಶ್ ಹೇಳಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಒತ್ತಡದಿಂದಾಗಿ ಜನರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಎಲ್ಲ ವರ್ಗದ ಎಲ್ಲ ವಯೋಮಾನದವರನ್ನೂ ಇದು ಆವರಿಸಿರುವುದು ಆತಂಕಕಾರಿ ಬೆಳವಣಿಗೆ ಎಂದರು.</p>.<p>‘ನಾನು ಈ ಹಿಂದೆ ನಿರ್ಮಿಸಿದ್ದ ಅಣ್ಣ- ತಂಗಿ, ತವರಿಗೆ ಬಾ ತಂಗಿ ಚಿತ್ರಗಳು ಪ್ರೇಕ್ಷಕರಲ್ಲಿ ಕಣ್ಣೀರು ತರಿಸಿದ್ದರೂ, ಅವರಲ್ಲಿ ಭಾತೃತ್ವ ಗಟ್ಟಿಗೊಳಿಸಿತ್ತು. ಈ ವರೆಗೆ 105 ಚಿತ್ರಗಳನ್ನು ನಿರ್ಮಿಸಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ, ರವಿಚಂದ್ರನ್, ಉಪೇಂದ್ರ, ಮಾಲಾಶ್ರೀ ಸೇರಿದಂತೆ ಅನೇಕ ದಿಗ್ಗಜರನ್ನು ಹಾಕಿಕೊಂಡು ಸಿನಿಮಾ ಮಾಡಿದ್ದೆ. ಆದರೆ, ಈ ಚಿತ್ರದಲ್ಲಿ ಕಥಾ ವಸ್ತುವೇ ಮುಖ್ಯವಾಗಿದೆ. ಇದರಲ್ಲಿ ನಾಯಕ ನಟ ಪಾತ್ರದಲ್ಲಿ ಅಭಿನಯಿಸಿರುವ ಜಯಸಿಂಹ ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ’ ಎಂದರು.</p>.<p>ಪೋಷಕ ನಟ ಗಣೇಶ್ ರಾವ್ ಮಾತನಾಡಿ, ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದೆ. ಚಿತ್ರದಲ್ಲಿ ಸಾಮಾನ್ಯ ವ್ಯಕ್ತಿಯಿಂದ ಹಿಡಿದು ಉದ್ಯಮಿ ಕಾಫಿ ಡೇ ಮಾಲೀಕನ ಅಂತ್ಯವನ್ನೂ ಪರೋಕ್ಷವಾಗಿ ಬಿಂಬಿಸಲಾಗಿದೆ ಎಂದರು.</p>.<p>ಚಿತ್ರದ ನಾಯಕ ನಟ ಜಯಸಿಂಹ, ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ತಾರಿಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಆತ್ಮಹತ್ಯೆ ನಿವಾರಣೆ ಕುರಿತು ಜಾಗೃತಿಯ ಸಂದೇಶ ಸಾರುವ `ಸೆಪ್ಟೆಂಬರ್- 10' ಸಿನಿಮಾ ಆಗಸ್ಟ್ 8ರಂದು ತೆರೆ ಕಾಣಲಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಓಂ ಸಾಯಿ ಪ್ರಕಾಶ್ ಹೇಳಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಒತ್ತಡದಿಂದಾಗಿ ಜನರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಎಲ್ಲ ವರ್ಗದ ಎಲ್ಲ ವಯೋಮಾನದವರನ್ನೂ ಇದು ಆವರಿಸಿರುವುದು ಆತಂಕಕಾರಿ ಬೆಳವಣಿಗೆ ಎಂದರು.</p>.<p>‘ನಾನು ಈ ಹಿಂದೆ ನಿರ್ಮಿಸಿದ್ದ ಅಣ್ಣ- ತಂಗಿ, ತವರಿಗೆ ಬಾ ತಂಗಿ ಚಿತ್ರಗಳು ಪ್ರೇಕ್ಷಕರಲ್ಲಿ ಕಣ್ಣೀರು ತರಿಸಿದ್ದರೂ, ಅವರಲ್ಲಿ ಭಾತೃತ್ವ ಗಟ್ಟಿಗೊಳಿಸಿತ್ತು. ಈ ವರೆಗೆ 105 ಚಿತ್ರಗಳನ್ನು ನಿರ್ಮಿಸಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ, ರವಿಚಂದ್ರನ್, ಉಪೇಂದ್ರ, ಮಾಲಾಶ್ರೀ ಸೇರಿದಂತೆ ಅನೇಕ ದಿಗ್ಗಜರನ್ನು ಹಾಕಿಕೊಂಡು ಸಿನಿಮಾ ಮಾಡಿದ್ದೆ. ಆದರೆ, ಈ ಚಿತ್ರದಲ್ಲಿ ಕಥಾ ವಸ್ತುವೇ ಮುಖ್ಯವಾಗಿದೆ. ಇದರಲ್ಲಿ ನಾಯಕ ನಟ ಪಾತ್ರದಲ್ಲಿ ಅಭಿನಯಿಸಿರುವ ಜಯಸಿಂಹ ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ’ ಎಂದರು.</p>.<p>ಪೋಷಕ ನಟ ಗಣೇಶ್ ರಾವ್ ಮಾತನಾಡಿ, ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದೆ. ಚಿತ್ರದಲ್ಲಿ ಸಾಮಾನ್ಯ ವ್ಯಕ್ತಿಯಿಂದ ಹಿಡಿದು ಉದ್ಯಮಿ ಕಾಫಿ ಡೇ ಮಾಲೀಕನ ಅಂತ್ಯವನ್ನೂ ಪರೋಕ್ಷವಾಗಿ ಬಿಂಬಿಸಲಾಗಿದೆ ಎಂದರು.</p>.<p>ಚಿತ್ರದ ನಾಯಕ ನಟ ಜಯಸಿಂಹ, ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ತಾರಿಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>