<p><strong>ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ಬಣವಿಕಲ್ಲು ಬಳಿ ಗುರುವಾರ ಸಂಜೆ ಸೇಬು ತುಂಬಿದ ಲಾರಿ ಪಲ್ಟಿಯಾದ ಪರಿಣಾಮ, ಸೇಬು ಹೊತ್ತೊಯ್ಯಲು ಜನ ಮುಗಿಬಿದ್ದರು.</p><p>ಜಮ್ಮ ಮತ್ತು ಕಾಶ್ಮೀರದ ಶ್ರೀನಗರದಿಂದ ಕೆರಳದ ಕೊಚ್ಚಿ ಗೆ ಹೊರಟಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ, ಚಾಲಕ ಸೇರಿ ಲಾರಿಯಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.</p><p>ಲಾರಿ ಬೀಳುತ್ತಿದ್ದಂತೆ ಸೇಬು ಹೊತ್ತೊಯ್ಯಲು ಜನತೆ ಮುಗಿಬಿದ್ದರು, ನೆಲಬೊಮ್ಮನಹಳ್ಳಿ, ಉಲ್ಲಾನಹಳ್ಳಿ, ಚಿಕ್ಕೋಬನಹಳ್ಳಿ,ಸೂಲಸಹಳ್ಳಿ, ಬಣವಿಕಲ್ಲು, ಎಂ.ಬಿ.ಅಯ್ಯನಹಳ್ಳಿ ಸೇರಿದಂತೆ ಸುತ್ತಲಿನ ಸಾವಿರಾರು ಜನರು ಸ್ಥಳದಲ್ಲಿ ಜಮಾಯಿಸಿದರು.</p><p>ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಧಾವಿಸಿ ಜನರನ್ನು ನಿಯಂತ್ರಿಸಿದರು, ಪೊಲೀಸರು ಬರುವ ಹೊತ್ತಿಗೆ ಸ್ವಲ್ಪ ಸೇಬನ್ನು ಜನ ಸಾಗಿಸಿದ್ದರು. ಕೆಲಕಾಲ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.</p><p>ಕಾನಹೊಸಹಳ್ಳಿಯ ಪಿಎಸ್ ಐ ಎರಿಯಪ್ಪ ಅಂಗಡಿ,ಎಎಸ್ ಐ ಚಂದ್ರಶೇಖರ್.ಕೆ ಸಿಬ್ಬಂದಿ ಜಗದೀಶ್, ಪ್ರಭಾಕರ್, ರವಿಗೌಡ, ಕಲ್ಲೇಶ್, ಸಿದ್ದಲಿಂಗಪ್ಪ, ತಿಪ್ಪೇರುದ್ರಪ್ಪ, ಹೊನ್ನೂರಪ್ಪ ನೆರವಿಗೆ ಧಾವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ಬಣವಿಕಲ್ಲು ಬಳಿ ಗುರುವಾರ ಸಂಜೆ ಸೇಬು ತುಂಬಿದ ಲಾರಿ ಪಲ್ಟಿಯಾದ ಪರಿಣಾಮ, ಸೇಬು ಹೊತ್ತೊಯ್ಯಲು ಜನ ಮುಗಿಬಿದ್ದರು.</p><p>ಜಮ್ಮ ಮತ್ತು ಕಾಶ್ಮೀರದ ಶ್ರೀನಗರದಿಂದ ಕೆರಳದ ಕೊಚ್ಚಿ ಗೆ ಹೊರಟಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ, ಚಾಲಕ ಸೇರಿ ಲಾರಿಯಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.</p><p>ಲಾರಿ ಬೀಳುತ್ತಿದ್ದಂತೆ ಸೇಬು ಹೊತ್ತೊಯ್ಯಲು ಜನತೆ ಮುಗಿಬಿದ್ದರು, ನೆಲಬೊಮ್ಮನಹಳ್ಳಿ, ಉಲ್ಲಾನಹಳ್ಳಿ, ಚಿಕ್ಕೋಬನಹಳ್ಳಿ,ಸೂಲಸಹಳ್ಳಿ, ಬಣವಿಕಲ್ಲು, ಎಂ.ಬಿ.ಅಯ್ಯನಹಳ್ಳಿ ಸೇರಿದಂತೆ ಸುತ್ತಲಿನ ಸಾವಿರಾರು ಜನರು ಸ್ಥಳದಲ್ಲಿ ಜಮಾಯಿಸಿದರು.</p><p>ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಧಾವಿಸಿ ಜನರನ್ನು ನಿಯಂತ್ರಿಸಿದರು, ಪೊಲೀಸರು ಬರುವ ಹೊತ್ತಿಗೆ ಸ್ವಲ್ಪ ಸೇಬನ್ನು ಜನ ಸಾಗಿಸಿದ್ದರು. ಕೆಲಕಾಲ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.</p><p>ಕಾನಹೊಸಹಳ್ಳಿಯ ಪಿಎಸ್ ಐ ಎರಿಯಪ್ಪ ಅಂಗಡಿ,ಎಎಸ್ ಐ ಚಂದ್ರಶೇಖರ್.ಕೆ ಸಿಬ್ಬಂದಿ ಜಗದೀಶ್, ಪ್ರಭಾಕರ್, ರವಿಗೌಡ, ಕಲ್ಲೇಶ್, ಸಿದ್ದಲಿಂಗಪ್ಪ, ತಿಪ್ಪೇರುದ್ರಪ್ಪ, ಹೊನ್ನೂರಪ್ಪ ನೆರವಿಗೆ ಧಾವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>