ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಹರಿಬಾಬು, ನೂತನ ವಿಜಯನಗರ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯನ್ನು ವ್ಯವಸ್ಥಿತವಾಗಿ ಡಾ. ಅರುಣ್ ಅವರು ಕಟ್ಟಿದ್ದಾರೆ. ಅವರ ಮಾರ್ಗದರ್ಶನ, ಸಲಹೆ ಪಡೆದು ಮುನ್ನಡೆಯಲಾಗುವುದು. ಅರುಣ್ ಉತ್ತಮ ಕೆಲಸ ಮಾಡಿದ್ದಾರೆ. ಅವರಂತೆಯೇ ಕೆಲಸ ಮಾಡಲು ಪ್ರಯತ್ನಿಸುತ್ತೇನೆ. ನನ್ನ ಅವಧಿಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.