<p><strong>ಹೊಸಪೇಟೆ (ವಿಜಯನಗರ): </strong>ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ಬಿರುಸಿನ ಮಳೆಯಾಗಿದೆ.</p>.<p>ಮಧ್ಯಾಹ್ನ ಎರಡೂವರೆ ಗಂಟೆಗೆ ಆರಂಭವಾದ ಮಳೆ ಆರು ಗಂಟೆಯ ವರೆಗೆ ಎಡೆಬಿಡದೆ ಸುರಿಯಿತು. ಬಿರುಸಿನ ಮಳೆಗೆ ನಗರದ ಬಸವೇಶ್ವರ ಬಡಾವಣೆಯಲ್ಲಿ ಇತ್ತೀಚೆಗೆ ನಿರ್ಮಿಸಿದ ಚರಂಡಿಗೆ ಹಾನಿಯಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/district/dakshina-kannada/heavy-rains-school-colleges-holiday-declared-in-dakshina-kannada-950186.html" itemprop="url">ದಕ್ಷಿಣ ಕನ್ನಡ: ನಾಳೆ ಶಾಲಾ ಕಾಲೇಜುಗಳಿಗೆ ರಜೆ </a></p>.<p>ತ್ಯಾಜ್ಯದ ನೀರೆಲ್ಲಾ ರಸ್ತೆ ಮೇಲೆ ಆವರಿಸಿಕೊಂಡು ಎಲ್ಲೆಡೆ ದುರ್ಗಂಧ ಹರಡಿತು. ನಗರದ ಹಂಪಿ ರಸ್ತೆ, ಚಿತ್ತವಾಡ್ಗಿ, ಬಳ್ಳಾರಿ ರಸ್ತೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಮಳೆ ನಿಲ್ಲುವವರೆಗೆ ಬಹುತೇಕ ರಸ್ತೆಗಳಲ್ಲಿ ಜನರ ಓಡಾಟ ತಗ್ಗಿತು.</p>.<p>ತಾಲ್ಲೂಕಿನ ಹಂಪಿ, ಕಮಲಾಪುರ, ಹೊಸೂರು, ನಾಗೇನಹಳ್ಳಿ,ಧರ್ಮದಗುಡ್ಡ, ಇಂಗಳಗಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<p>ಕಳೆದ ಒಂದು ತಿಂಗಳಿಂದ ಮಳೆಯಾಗಿರಲಿಲ್ಲ. ಬಿತ್ತನೆ ಮಾಡಿದವರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಗುರುವಾರ ಸುರಿದ ಬಿರುಸಿನ ಮಳೆಗೆ ತಾಲ್ಲೂಕಿನ ರೈತರು ಸಂತಸಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ಬಿರುಸಿನ ಮಳೆಯಾಗಿದೆ.</p>.<p>ಮಧ್ಯಾಹ್ನ ಎರಡೂವರೆ ಗಂಟೆಗೆ ಆರಂಭವಾದ ಮಳೆ ಆರು ಗಂಟೆಯ ವರೆಗೆ ಎಡೆಬಿಡದೆ ಸುರಿಯಿತು. ಬಿರುಸಿನ ಮಳೆಗೆ ನಗರದ ಬಸವೇಶ್ವರ ಬಡಾವಣೆಯಲ್ಲಿ ಇತ್ತೀಚೆಗೆ ನಿರ್ಮಿಸಿದ ಚರಂಡಿಗೆ ಹಾನಿಯಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/district/dakshina-kannada/heavy-rains-school-colleges-holiday-declared-in-dakshina-kannada-950186.html" itemprop="url">ದಕ್ಷಿಣ ಕನ್ನಡ: ನಾಳೆ ಶಾಲಾ ಕಾಲೇಜುಗಳಿಗೆ ರಜೆ </a></p>.<p>ತ್ಯಾಜ್ಯದ ನೀರೆಲ್ಲಾ ರಸ್ತೆ ಮೇಲೆ ಆವರಿಸಿಕೊಂಡು ಎಲ್ಲೆಡೆ ದುರ್ಗಂಧ ಹರಡಿತು. ನಗರದ ಹಂಪಿ ರಸ್ತೆ, ಚಿತ್ತವಾಡ್ಗಿ, ಬಳ್ಳಾರಿ ರಸ್ತೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಮಳೆ ನಿಲ್ಲುವವರೆಗೆ ಬಹುತೇಕ ರಸ್ತೆಗಳಲ್ಲಿ ಜನರ ಓಡಾಟ ತಗ್ಗಿತು.</p>.<p>ತಾಲ್ಲೂಕಿನ ಹಂಪಿ, ಕಮಲಾಪುರ, ಹೊಸೂರು, ನಾಗೇನಹಳ್ಳಿ,ಧರ್ಮದಗುಡ್ಡ, ಇಂಗಳಗಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<p>ಕಳೆದ ಒಂದು ತಿಂಗಳಿಂದ ಮಳೆಯಾಗಿರಲಿಲ್ಲ. ಬಿತ್ತನೆ ಮಾಡಿದವರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಗುರುವಾರ ಸುರಿದ ಬಿರುಸಿನ ಮಳೆಗೆ ತಾಲ್ಲೂಕಿನ ರೈತರು ಸಂತಸಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>