ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆಯಲ್ಲಿ ಬಿರುಸಿನ ಮಳೆ

Last Updated 30 ಜೂನ್ 2022, 13:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ಬಿರುಸಿನ ಮಳೆಯಾಗಿದೆ.

ಮಧ್ಯಾಹ್ನ ಎರಡೂವರೆ ಗಂಟೆಗೆ ಆರಂಭವಾದ ಮಳೆ ಆರು ಗಂಟೆಯ ವರೆಗೆ ಎಡೆಬಿಡದೆ ಸುರಿಯಿತು. ಬಿರುಸಿನ ಮಳೆಗೆ ನಗರದ ಬಸವೇಶ್ವರ ಬಡಾವಣೆಯಲ್ಲಿ ಇತ್ತೀಚೆಗೆ ನಿರ್ಮಿಸಿದ ಚರಂಡಿಗೆ ಹಾನಿಯಾಗಿದೆ.

ತ್ಯಾಜ್ಯದ ನೀರೆಲ್ಲಾ ರಸ್ತೆ ಮೇಲೆ ಆವರಿಸಿಕೊಂಡು ಎಲ್ಲೆಡೆ ದುರ್ಗಂಧ ಹರಡಿತು. ನಗರದ ಹಂಪಿ ರಸ್ತೆ, ಚಿತ್ತವಾಡ್ಗಿ, ಬಳ್ಳಾರಿ ರಸ್ತೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಮಳೆ ನಿಲ್ಲುವವರೆಗೆ ಬಹುತೇಕ ರಸ್ತೆಗಳಲ್ಲಿ ಜನರ ಓಡಾಟ ತಗ್ಗಿತು.

ತಾಲ್ಲೂಕಿನ ಹಂಪಿ, ಕಮಲಾಪುರ, ಹೊಸೂರು, ನಾಗೇನಹಳ್ಳಿ,ಧರ್ಮದಗುಡ್ಡ, ಇಂಗಳಗಿ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಕಳೆದ ಒಂದು ತಿಂಗಳಿಂದ ಮಳೆಯಾಗಿರಲಿಲ್ಲ. ಬಿತ್ತನೆ ಮಾಡಿದವರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಗುರುವಾರ ಸುರಿದ ಬಿರುಸಿನ ಮಳೆಗೆ ತಾಲ್ಲೂಕಿನ ರೈತರು ಸಂತಸಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT