<p><strong>ಹೊಸಪೇಟೆ (ವಿಜಯನಗರ):</strong> ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಸತತವಾಗಿ ಸುರಿದ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.</p>.<p>ಮಂಗಳವಾರ ರಾತ್ರಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆಯಾಗಿತ್ತು. ಕೆಲಸಮಯ ಬಿಡುವು ಕೊಟ್ಟ ಮಳೆ ಬುಧವಾರ ಬೆಳಿಗ್ಗೆ ಮತ್ತೆ ಸುರಿಯಿತು. ಸೋಮವಾರ ಸಂಜೆಯೂ ಮಳೆಯಾಗಿತ್ತು.</p>.<p>ಸತತವಾಗಿ ಸುರಿಯುತ್ತಿರುವ ಮಳೆಯಿಂದ ತಾಪಮಾನದಲ್ಲಿ ಭಾರಿ ಇಳಿಕೆ ಉಂಟಾಗಿದೆ. ಕಾರ್ಮೋಡ ಕವಿದು, ತುಂತುರು ಮಳೆ ಮುಂದುವರೆದಿದೆ. ಕೆಂಡದಂತಹ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/district/vijayanagara/man-shifted-hospital-through-scooty-scooter-in-hospet-accident-case-829686.html" itemprop="url">ಸಕಾಲಕ್ಕೆ ಬರದ ಆಂಬುಲೆನ್ಸ್; ಸ್ಕೂಟಿಯಲ್ಲಿ ವ್ಯಕ್ತಿ ಆಸ್ಪತ್ರೆಗೆ </a></p>.<p>ಬೆಳಿಗ್ಗೆ ಆರರಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುವುದರಿಂದ ಜನ ಮಳೆ ಲೆಕ್ಕಿಸದೆ ಹೊರಗೆ ಬಂದು ತರಕಾರಿ,ಹಣ್ಣು ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಿ ಕೊಂಡೊಯ್ದರು.</p>.<p>ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ, ಹೊಸೂರು, ಧರ್ಮದ ಗುಡ್ಡ, ಬಸವನದುರ್ಗ, ನಾಗೇನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಸತತವಾಗಿ ಸುರಿದ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.</p>.<p>ಮಂಗಳವಾರ ರಾತ್ರಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆಯಾಗಿತ್ತು. ಕೆಲಸಮಯ ಬಿಡುವು ಕೊಟ್ಟ ಮಳೆ ಬುಧವಾರ ಬೆಳಿಗ್ಗೆ ಮತ್ತೆ ಸುರಿಯಿತು. ಸೋಮವಾರ ಸಂಜೆಯೂ ಮಳೆಯಾಗಿತ್ತು.</p>.<p>ಸತತವಾಗಿ ಸುರಿಯುತ್ತಿರುವ ಮಳೆಯಿಂದ ತಾಪಮಾನದಲ್ಲಿ ಭಾರಿ ಇಳಿಕೆ ಉಂಟಾಗಿದೆ. ಕಾರ್ಮೋಡ ಕವಿದು, ತುಂತುರು ಮಳೆ ಮುಂದುವರೆದಿದೆ. ಕೆಂಡದಂತಹ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/district/vijayanagara/man-shifted-hospital-through-scooty-scooter-in-hospet-accident-case-829686.html" itemprop="url">ಸಕಾಲಕ್ಕೆ ಬರದ ಆಂಬುಲೆನ್ಸ್; ಸ್ಕೂಟಿಯಲ್ಲಿ ವ್ಯಕ್ತಿ ಆಸ್ಪತ್ರೆಗೆ </a></p>.<p>ಬೆಳಿಗ್ಗೆ ಆರರಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುವುದರಿಂದ ಜನ ಮಳೆ ಲೆಕ್ಕಿಸದೆ ಹೊರಗೆ ಬಂದು ತರಕಾರಿ,ಹಣ್ಣು ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಿ ಕೊಂಡೊಯ್ದರು.</p>.<p>ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ, ಹೊಸೂರು, ಧರ್ಮದ ಗುಡ್ಡ, ಬಸವನದುರ್ಗ, ನಾಗೇನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>