ಕಾರ್ಖಾನೆ ಮುಚ್ಚಲು ಆನಂದ್ ಸಿಂಗ್ ಅವರೇ ಕಾರಣ ಎಂದು ರಾಜಕೀಯ ಪಕ್ಷಗಳ ಕೆಲ ಮುಖಂಡರು, ರೈತ ಸಂಘಟನೆಗಳು, ಸಂಘ ಸಂಸ್ಥೆಗಳವರು ಆರೋಪಿಸುತ್ತಿರುವ ಬೆನ್ನಲ್ಲೇ ಕಾರ್ಖಾನೆಯ ನಿರ್ದೇಶಕರು ಅದರ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಆನಂದ್ ಸಿಂಗ್ ವಿರುದ್ಧ ಆರೋಪ ಮಾಡಿದರೆ ಅವರ ಪರ ಕಾರ್ಖಾನೆಯ ನಿರ್ದೇಶಕರೇಕೆ ಸ್ಪಷ್ಟೀಕರಣ ನೀಡಿದ್ದಾರೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ.