ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಆನಂದ್ ಸಿಂಗ್‌ಗೆ ಮತ್ತೆ ಸಚಿವ ಸ್ಥಾನ

Last Updated 4 ಆಗಸ್ಟ್ 2021, 3:39 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.

ಆನಂದ್ ಸಿಂಗ್ ಅವರು ಮಂಗಳವಾರವೇ ಬೆಂಗಳೂರಿಗೆ ಪಯಣ ಬೆಳೆಸಿದ್ದಾರೆ. ಬುಧವಾರ ಮಧ್ಯಾಹ್ನ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವರು ಎಂದು ತಿಳಿದು ಬಂದಿದೆ.

'ಆನಂದ್ ಸಿಂಗ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಾತ್ರಿ. ಕೋವಿಡ್ ಇರುವುದರಿಂದ ಕ್ಷೇತ್ರದಿಂದ ಬೆಂಬಲಿಗರು ಬೆಂಗಳೂರಿಗೆ ಹೋಗುತ್ತಿಲ್ಲ' ಎಂದು ಸಿಂಗ್ ಅಳಿಯ, ಯುವ ಮುಖಂಡ‌ ಸಂದೀಪ್ ಸಿಂಗ್ 'ಪ್ರಜಾವಾಣಿ'ಗೆ ಖಚಿತಪಡಿಸಿದ್ದಾರೆ.

ಉಪಚುನಾವಣೆ ಸೇರಿದಂತೆ ಸತತ‌ ನಾಲ್ಕು ಸಲ ವಿಜಯನಗರ ಕ್ಷೇತ್ರದಿಂದ ಆನಂದ್ ಸಿಂಗ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತವಿದ್ದಾಗ ಒಟ್ಟು ಹದಿನೇಳು ಜನ ಶಾಸಕರಲ್ಲಿ ಆನಂದ್ ಸಿಂಗ್ ಎಲ್ಲರಿಗಿಂತ ಮೊದಲು ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT