ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಹಡಗಲಿ: ತಾಯಿಯನ್ನು ಕೊಂದಿದ್ದ ಮಗನ ಹತ್ಯೆ

Last Updated 16 ಸೆಪ್ಟೆಂಬರ್ 2021, 13:03 IST
ಅಕ್ಷರ ಗಾತ್ರ

ಹೂವಿನಹಡಗಲಿ: ಆಸ್ತಿ ಹಂಚಿಕೆ ವಿಚಾರವಾಗಿ ಒಂಬತ್ತು ವರ್ಷಗಳ ಹಿಂದೆ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು ಗುರುವಾರ ಆತನ ಸಹೋದರನೇ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಅಲ್ಲಿಪುರ ಗ್ರಾಮದಲ್ಲಿ ಜರುಗಿದೆ.

ಕುರಿ ಶಿವಪ್ಪ (39) ಕೊಲೆಯಾದವರು. ಈತನ ಕಿರಿಯ ಸಹೋದರ ಕುರಿ ಪಕ್ಕಿರೇಶ (37) ಕೊಲೆ ಆರೋಪಿ. ಜಮೀನು ಮಾರಾಟದಿಂದ ಬಂದ ಹಣ ಹಂಚಿಕೆ ವಿಚಾರವಾಗಿ ಸಹೋದರರ ನಡುವೆ ಜಗಳ ಉಂಟಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಪಕ್ಕಿರೇಶ ತನ್ನ ಅಣ್ಣನ ಮೇಲೆ ಕೊಡಲಿಯಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆಸ್ತಿಗಳನ್ನು ಸಮನಾಗಿ ಹಂಚಿಕೆ ಮಾಡಿಲ್ಲ ಎಂದು ಈಗ ಕೊಲೆಯಾಗಿರುವ ಶಿವಪ್ಪ 9 ವರ್ಷಗಳ ಹಿಂದೆ ತನ್ನ ತಾಯಿ ಸೋಮವ್ವಳನ್ನುಕೊಲೆ ಮಾಡಿ ಜೈಲು ಸೇರಿದ್ದ. ಎರಡು ವರ್ಷಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿ ಸಹೋದರನ ಮನೆಯಲ್ಲೇ ವಾಸವಾಗಿದ್ದ.

ಇಂದು ಬೆಳಿಗ್ಗೆ ಮತ್ತೆ ಆಸ್ತಿ ವಿಚಾರವಾಗಿ ಸಹೋದರರ ನಡುವೆ ಏರ್ಪಟ್ಟ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಆರೋಪಿ ಪಕ್ಕಿರೇಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಸಿಪಿಐ ರಮೇಶ ಕುಲಕರ್ಣಿ, ಪಿಎಸ್ಐ ದಾದಾವಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT