<p><strong>ಹೊಸಪೇಟೆ (ವಿಜಯನಗರ):</strong> ಪ್ರತಿಯೊಬ್ಬ ವಿದ್ಯಾರ್ಥಿ ನಮ್ಮ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಮುಖ್ಯ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.</p><p>ಬಯಲು ವಸ್ತು ಸಂಗ್ರಾಲಯದ ಎಂದೇ ವಿಶ್ವವಿಖ್ಯಾತವಾಗಿರುವ ಹಂಪಿಗೆ ಬುಧವಾರ ಭೇಟಿ ನೀಡಿದ ಅವರು, ವಿಜಯ ವಿಠ್ಠಲ ದೇವಸ್ಥಾನದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳಿಗೆ ಹಂಪಿಯ ಕುರಿತು ಪಾಠ ಮಾಡಿ ಗಮನ ಸೆಳೆದರು.</p><p>'ಈ ಹಿಂದೆ ದೇಶವನ್ನು ಆಳಿದ ಅರಸರು, ವಿವಿಧ ಸಾಮ್ರಾಜ್ಯಗಳ ಕುರಿತು ಅರಿತುಕೊಳ್ಳುವುದು ಮುಖ್ಯ. ಪೋಷಕರು ಸಹ ಮಕ್ಕಳಿಗೆ ಇತಿಹಾಸದ ಕುರಿತು ತಿಳಿಸುವುದು ಹಾಗೂ ಅಲ್ಲಿಗೆ ಪ್ರವಾಸಕ್ಕೆ ಕಳುಹಿಸಬೇಕಿದೆ' ಎಂದರು.</p><p>ಸಾಮ್ರಾಜ್ಯವನ್ನು ಆಳಿದ ಅರಸರು, ರಾಜರು, ಪಾಳೇಗಾರರು ಜನಪರವಾಗಿ ಕೈಗೊಂಡಿದ್ದ ಕಲೆ, ಸಂಸ್ಕೃತಿ, ಕೃಷಿ, ಹಣಕಾಸು ನಿರ್ವಹಣೆ, ರಾಜ್ಯ ಮುನ್ನೆಡೆಸಿದ ರೀತಿ ಸೇರಿದಂತೆ ಸಂಪೂರ್ಣ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದರು.</p><p>ಬೆಳಿಗ್ಗೆ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ಸಂಜೆ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿ, ಕಲ್ಲಿನ ರಥ ಸೇರಿದಂತೆ ಸಪ್ತಸ್ವರ ಮಂಟಪವನ್ನು ವೀಕ್ಷಿಸಿ ಪ್ರವಾಸಿ ಮಾರ್ಗದರ್ಶಕರಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಟಪದಲ್ಲಿನ ಕಂಬಗಳಿಗೆ ಕಿವಿಗೊಟ್ಟು ಸಪ್ತಸ್ವರದ ನಾದವನ್ನು ಆಲಿಸಿ ಸಂತಸಪಟ್ಟರು. </p><p>ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಪ್ರತಿಯೊಬ್ಬ ವಿದ್ಯಾರ್ಥಿ ನಮ್ಮ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಮುಖ್ಯ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.</p><p>ಬಯಲು ವಸ್ತು ಸಂಗ್ರಾಲಯದ ಎಂದೇ ವಿಶ್ವವಿಖ್ಯಾತವಾಗಿರುವ ಹಂಪಿಗೆ ಬುಧವಾರ ಭೇಟಿ ನೀಡಿದ ಅವರು, ವಿಜಯ ವಿಠ್ಠಲ ದೇವಸ್ಥಾನದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳಿಗೆ ಹಂಪಿಯ ಕುರಿತು ಪಾಠ ಮಾಡಿ ಗಮನ ಸೆಳೆದರು.</p><p>'ಈ ಹಿಂದೆ ದೇಶವನ್ನು ಆಳಿದ ಅರಸರು, ವಿವಿಧ ಸಾಮ್ರಾಜ್ಯಗಳ ಕುರಿತು ಅರಿತುಕೊಳ್ಳುವುದು ಮುಖ್ಯ. ಪೋಷಕರು ಸಹ ಮಕ್ಕಳಿಗೆ ಇತಿಹಾಸದ ಕುರಿತು ತಿಳಿಸುವುದು ಹಾಗೂ ಅಲ್ಲಿಗೆ ಪ್ರವಾಸಕ್ಕೆ ಕಳುಹಿಸಬೇಕಿದೆ' ಎಂದರು.</p><p>ಸಾಮ್ರಾಜ್ಯವನ್ನು ಆಳಿದ ಅರಸರು, ರಾಜರು, ಪಾಳೇಗಾರರು ಜನಪರವಾಗಿ ಕೈಗೊಂಡಿದ್ದ ಕಲೆ, ಸಂಸ್ಕೃತಿ, ಕೃಷಿ, ಹಣಕಾಸು ನಿರ್ವಹಣೆ, ರಾಜ್ಯ ಮುನ್ನೆಡೆಸಿದ ರೀತಿ ಸೇರಿದಂತೆ ಸಂಪೂರ್ಣ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದರು.</p><p>ಬೆಳಿಗ್ಗೆ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ಸಂಜೆ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿ, ಕಲ್ಲಿನ ರಥ ಸೇರಿದಂತೆ ಸಪ್ತಸ್ವರ ಮಂಟಪವನ್ನು ವೀಕ್ಷಿಸಿ ಪ್ರವಾಸಿ ಮಾರ್ಗದರ್ಶಕರಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಟಪದಲ್ಲಿನ ಕಂಬಗಳಿಗೆ ಕಿವಿಗೊಟ್ಟು ಸಪ್ತಸ್ವರದ ನಾದವನ್ನು ಆಲಿಸಿ ಸಂತಸಪಟ್ಟರು. </p><p>ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>