ಮೇ 14ರಂದು ನಡೆದ ಸಭೆಯಲ್ಲಿ ಪಿಎಸ್ಐ ವಿಜಯಕೃಷ್ಣ ಅವರು ಅಕ್ರಮ ಮರಳು ಸಾಗಾಣಿಕೆ ಸಂಬಂಧ ಹೆಚ್ಚಿನ ದೂರುಗಳು ಬಂದಿದ್ದು, ಆ ಪ್ರದೇಶಕ್ಕೆ ನಿಮ್ಮನ್ನು ನಿಯೋಜಿಸಲಾಗಿದ್ದು, ಗಸ್ತು ತಿರುಗಬೇಕೆಂದು ಕಾನ್ಸ್ಟೆಬಲ್ ಉತ್ತಂಗಿ ಕೊಟ್ರಗೌಡ ಅವರಿಗೆ ಸೂಚಿಸಿದ್ದರು. ಆದರೆ, ಕಾನ್ಸ್ಟೆಬಲ್ ಉತ್ತಂಗಿ ಕೊಟ್ರಗೌಡ, ‘ಆ ಬೀಟ್ ನನ್ನದಲ್ಲ, ನಾನು ಅಲ್ಲಿಗೆ ಹೋಗುವುದಿಲ್ಲ’ ಎಂದು ಪಿಎಸ್ಐ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರಿಗೆ ಬೆದರಿಕೆಯೊಡ್ಡಿದ್ದರು.