ಹೊಸಪೇಟೆ (ವಿಜಯನಗರ): ಸದಾಶಿವ ಪ್ರಭು ಬಿ. ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗುರುವಾರ ನಗರದಲ್ಲಿ ಅಧಿಕಾರ ಸ್ವೀಕರಿಸಿದರು.
ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಅನ್ನದಾನ ಸ್ವಾಮಿ, ಸಹಾಯಕ ಕಾರ್ಯದರ್ಶಿ ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು. ಜ. 31ರಂದು ಹರ್ಷಲ್ ಭೋಯರ್ ನಾರಾಯಣರಾವ್ ಅವರನ್ನು ಸಿಇಒ ಹುದ್ದೆಯಿಂದ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಅವರ ಜಾಗಕ್ಕೆ ಪ್ರಭು ಅವರನ್ನು ನೇಮಿಸಿತ್ತು.