<p><strong>ಹೊಸಪೇಟೆ</strong>: ನಗರ, ತಾಲ್ಲೂಕಿನ ವಿವಿಧೆಡೆ ಹಾಗೂ ಜಿಲ್ಲೆಯ ನಾನಾ ಭಾಗದಲ್ಲಿನ ರಾಯರ ಮಠಗಳಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ಮಂಗಳವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಎಲ್ಲೆಡೆ ಮಹಾರಥೋತ್ಸವ ನಡೆಯಿತು.</p>.<p>ನಗರದ ರಾಣಿಪೇಟೆ ರಾಯರ ಮಠದಲ್ಲಿ ಉತ್ತರಾರಾಧನೆ ಪ್ರಯುಕ್ತ ವಿಶೇಷವಾಗಿ ಫಲ ಪಂಚಾಮೃತಾಭಿಷೇಕ, ಸರ್ವಸೇವಾ, ಕನಕಾಭಿಷೇಕ, ಮಹಾನೈವೈದ್ಯ, ಹಸ್ತೋದಕ ಜರುಗಿತು. ಅಲಂಕಾರ ಪಂಕ್ತಿ, ಭಕ್ತರಿಗೆ ಅನ್ನದಾನ ನೆರವೇರಿಸಲಾಯಿತು. ಬೆಳಿಗ್ಗೆ ಪ್ರಮುಖ ಮಾರ್ಗದಲ್ಲಿ ಉತ್ಸವಮೂರ್ತಿ ರಥೋತ್ಸವ ನಡೆಯಿತು.</p>.<p>ಭಜನೆ, ಕೀರ್ತನೆಗಳೊಂದಿಗೆ ನೆರವೇರಿಸಲಾಯಿತು. ಮಠದ ವ್ಯವಸ್ಥಾಪಕ ಗುರುರಾಜ್ ದಿಗ್ಗಾವಿ, ಮಾರುತಿ ಆಚಾರ್ಯ ಇತರರಿದ್ದರು.</p>.<p>ಗಾಂಧಿ ಕಾಲೋನಿ, ವಿಜಯ ಚಿತ್ರಮಂದಿರ ಸಮೀಪದ ರಾಯರ ಮಠಗಳಲ್ಲಿ ಸಹ ಭಕ್ತಿಯಿಂದ ಉತ್ತರಾರಾಧನೆ ನಡೆಯಿತು.</p>.<p>ಟಿ.ಬಿ.ಡ್ಯಾಂ ಮಾರುತಿ ಕಾಲೋನಿಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿನ ರಾಯರ ಬೃಂದಾವನಕ್ಕೆ ಬೆಳ್ಳಿ ಕವಚ ತೊಡಿಸಿ ಆರಾಧನೆ ಮಾಡಲಾಯಿತು. ಕಳೆದ 45 ವರ್ಷಗಳಿಂದ ಇಲ್ಲಿ ಆರಾಧನೆ ನಡೆಯುತ್ತಿದೆ. ಶ್ರಾವಣ ಮಾಸದಲ್ಲಿ ದೊರೆಯುವ ಎಲ್ಲಾ ಫಲಗಳನ್ನು ಪಂಚಾಮೃತಕ್ಕೆ ಬಳಸಲಾಯಿತು.</p>.<p>ತಾಲ್ಲೂಕಿನ ಕಮಲಾಪುರ ಪಟ್ಟಣದ ಶ್ರೀರಾಯರ ಮಠದಲ್ಲಿ ವಿಶೇಷವಾಗಿ ಉತ್ತರಾರಾಧನೆ ನಡೆಯಿತು. ವ್ಯವಸ್ಥಾಪಕ ಗುಂಜಳ್ಳಿ ಟೀಕಾಚಾರ್ಯ, ಮಂತ್ರಾಲಯ ಗುರುಸಾರ್ವಭೌಮರ ದಾಸ ಸಾಹಿತ್ಯ ಪ್ರಾಜೆಕ್ಟ್ ಜಿಲ್ಲಾ ಕೋ-ಆರ್ಡಿನೇಟರ್ ಅನಂತ ಪದ್ಮನಾಭ, ಹರಿಗೌಡ, ಧೀರೇಂದ್ರ ಆಚಾರ್ಯ, ವಾದಿರಾಜ್ ಇತರರಿದ್ದರು. ಮಹಿಳೆಯರಿಂದ ಭಜನೆ ನಡೆಯಿತು.</p>.<p><strong>ವೈಭವದ ಮೆರವಣಿಗೆ</strong></p>.<p>ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ಮಂಗಳವಾರ ರಾಘವೇಂದ್ರಸ್ವಾಮಿಗಳ 354ನೇ ಆರಾಧನ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.</p>.<p>ಆರಾಧನೆ ಅಂಗವಾಗಿ ಬೆಳಿಗ್ಗೆ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಷ್ಟೋತ್ತರ, ಲಲಿತ ಸಹಸ್ರನಾಮ, ಪಂಚಾಮೃತ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.</p>.<p>10ಗಂಟೆಗೆ ಮಠದಿಂದ ಆರಂಭವಾದ ರಾಯರ ಭಾವಚಿತ್ರದ ಮೆರವಣಿಗೆ ಮುಖ್ಯಬೀದಿಗಳಲ್ಲಿ ಸಾಗಿತು. ನಂತರ ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮುಖ್ಯವೃತ್ತ ಬಳಿಸಿಕೊಂಡು ವೆಂಕಟಾಪುರ ರಸ್ತೆಯ ಮೂಲಕ ಪುನಃ ಮಠಕ್ಕೆ ತೆರಳಿತು.</p>.<p>ಮಧ್ಯಾಹ್ನ 12ಕ್ಕೆ ಮಠದಲ್ಲಿ ರಾಯರ ಜಯಘೋಷಗಳೊಂದಿಗೆ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಬ್ರಾಹ್ಮಣ ಸಮಾಜದ ಹಿರಿಯರು, ಮಹಿಳೆಯರು, ಮಕ್ಕಳು ಹಾಗೂ ಯುವಕರು ಸೇರಿದಂತೆ ರಾಯರ ಸೇವಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು. ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.<br><br></p>.<p><strong>ಸಂಭ್ರಮದ ರಥೋತ್ಸವ</strong></p>.<p>ಹೂವಿನಹಡಗಲಿ: ಪಟ್ಟಣದಲ್ಲಿ ಮಂಗಳವಾರ ರಾಘವೇಂದ್ರ ಸ್ವಾಮಿ ರಥೋತ್ಸವ ಜರುಗಿತು.</p>.<p>ರಾಯರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ರಾಘವೇಂದ್ರ ಮಠದಲ್ಲಿನ ಬೃಂದಾವನಕ್ಕೆ ಬೆಳಿಗ್ಗೆ ಪಂಚಾಮೃತ ಅಭಿಷೇ ನೆರವೇರಿಸಲಾಯಿತು. ವಿಷ್ಣು ಸಹಸ್ರನಾಮ, ವಾಯುಸ್ತುತಿ ಪುನಶ್ಚರಣ, ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಜರುಗಿತು. ನಂತರ ಕನಕಾಭಿಷೇಕದೊಂದಿಗೆ ಪಲ್ಲಕ್ಕಿ ಉತ್ಸವ ನೆರವೇರಿತು.</p>.<p>ರಾಯರ ಭಜನೆಯೊಂದಿಗೆ ಕೋಟೆ ಪ್ರದೇಶದ ಮಹಾದ್ವಾರದವರೆಗೆ ರಥೋತ್ಸವ ಜರುಗಿತು. ಮಠದ ಧರ್ಮಕರ್ತ ವೇಣುಗೋಪಾಲ ಆಚಾರ್, ಎಸ್.ಅಶ್ವಥ ನಾರಾಯಣ, ಜಿತಾಮಿತ್ರಾಚಾರ್ಯ ಡಾ. ಫಣಿರಾಜ್, ಕೇಶವಮೂರ್ತಿ ಗೋಸಾವಿ, ರಾಘವೇಂದ್ರ ಆಚಾರ್ ಇದ್ದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ನಗರ, ತಾಲ್ಲೂಕಿನ ವಿವಿಧೆಡೆ ಹಾಗೂ ಜಿಲ್ಲೆಯ ನಾನಾ ಭಾಗದಲ್ಲಿನ ರಾಯರ ಮಠಗಳಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ಮಂಗಳವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಎಲ್ಲೆಡೆ ಮಹಾರಥೋತ್ಸವ ನಡೆಯಿತು.</p>.<p>ನಗರದ ರಾಣಿಪೇಟೆ ರಾಯರ ಮಠದಲ್ಲಿ ಉತ್ತರಾರಾಧನೆ ಪ್ರಯುಕ್ತ ವಿಶೇಷವಾಗಿ ಫಲ ಪಂಚಾಮೃತಾಭಿಷೇಕ, ಸರ್ವಸೇವಾ, ಕನಕಾಭಿಷೇಕ, ಮಹಾನೈವೈದ್ಯ, ಹಸ್ತೋದಕ ಜರುಗಿತು. ಅಲಂಕಾರ ಪಂಕ್ತಿ, ಭಕ್ತರಿಗೆ ಅನ್ನದಾನ ನೆರವೇರಿಸಲಾಯಿತು. ಬೆಳಿಗ್ಗೆ ಪ್ರಮುಖ ಮಾರ್ಗದಲ್ಲಿ ಉತ್ಸವಮೂರ್ತಿ ರಥೋತ್ಸವ ನಡೆಯಿತು.</p>.<p>ಭಜನೆ, ಕೀರ್ತನೆಗಳೊಂದಿಗೆ ನೆರವೇರಿಸಲಾಯಿತು. ಮಠದ ವ್ಯವಸ್ಥಾಪಕ ಗುರುರಾಜ್ ದಿಗ್ಗಾವಿ, ಮಾರುತಿ ಆಚಾರ್ಯ ಇತರರಿದ್ದರು.</p>.<p>ಗಾಂಧಿ ಕಾಲೋನಿ, ವಿಜಯ ಚಿತ್ರಮಂದಿರ ಸಮೀಪದ ರಾಯರ ಮಠಗಳಲ್ಲಿ ಸಹ ಭಕ್ತಿಯಿಂದ ಉತ್ತರಾರಾಧನೆ ನಡೆಯಿತು.</p>.<p>ಟಿ.ಬಿ.ಡ್ಯಾಂ ಮಾರುತಿ ಕಾಲೋನಿಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿನ ರಾಯರ ಬೃಂದಾವನಕ್ಕೆ ಬೆಳ್ಳಿ ಕವಚ ತೊಡಿಸಿ ಆರಾಧನೆ ಮಾಡಲಾಯಿತು. ಕಳೆದ 45 ವರ್ಷಗಳಿಂದ ಇಲ್ಲಿ ಆರಾಧನೆ ನಡೆಯುತ್ತಿದೆ. ಶ್ರಾವಣ ಮಾಸದಲ್ಲಿ ದೊರೆಯುವ ಎಲ್ಲಾ ಫಲಗಳನ್ನು ಪಂಚಾಮೃತಕ್ಕೆ ಬಳಸಲಾಯಿತು.</p>.<p>ತಾಲ್ಲೂಕಿನ ಕಮಲಾಪುರ ಪಟ್ಟಣದ ಶ್ರೀರಾಯರ ಮಠದಲ್ಲಿ ವಿಶೇಷವಾಗಿ ಉತ್ತರಾರಾಧನೆ ನಡೆಯಿತು. ವ್ಯವಸ್ಥಾಪಕ ಗುಂಜಳ್ಳಿ ಟೀಕಾಚಾರ್ಯ, ಮಂತ್ರಾಲಯ ಗುರುಸಾರ್ವಭೌಮರ ದಾಸ ಸಾಹಿತ್ಯ ಪ್ರಾಜೆಕ್ಟ್ ಜಿಲ್ಲಾ ಕೋ-ಆರ್ಡಿನೇಟರ್ ಅನಂತ ಪದ್ಮನಾಭ, ಹರಿಗೌಡ, ಧೀರೇಂದ್ರ ಆಚಾರ್ಯ, ವಾದಿರಾಜ್ ಇತರರಿದ್ದರು. ಮಹಿಳೆಯರಿಂದ ಭಜನೆ ನಡೆಯಿತು.</p>.<p><strong>ವೈಭವದ ಮೆರವಣಿಗೆ</strong></p>.<p>ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ಮಂಗಳವಾರ ರಾಘವೇಂದ್ರಸ್ವಾಮಿಗಳ 354ನೇ ಆರಾಧನ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.</p>.<p>ಆರಾಧನೆ ಅಂಗವಾಗಿ ಬೆಳಿಗ್ಗೆ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಷ್ಟೋತ್ತರ, ಲಲಿತ ಸಹಸ್ರನಾಮ, ಪಂಚಾಮೃತ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.</p>.<p>10ಗಂಟೆಗೆ ಮಠದಿಂದ ಆರಂಭವಾದ ರಾಯರ ಭಾವಚಿತ್ರದ ಮೆರವಣಿಗೆ ಮುಖ್ಯಬೀದಿಗಳಲ್ಲಿ ಸಾಗಿತು. ನಂತರ ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮುಖ್ಯವೃತ್ತ ಬಳಿಸಿಕೊಂಡು ವೆಂಕಟಾಪುರ ರಸ್ತೆಯ ಮೂಲಕ ಪುನಃ ಮಠಕ್ಕೆ ತೆರಳಿತು.</p>.<p>ಮಧ್ಯಾಹ್ನ 12ಕ್ಕೆ ಮಠದಲ್ಲಿ ರಾಯರ ಜಯಘೋಷಗಳೊಂದಿಗೆ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಬ್ರಾಹ್ಮಣ ಸಮಾಜದ ಹಿರಿಯರು, ಮಹಿಳೆಯರು, ಮಕ್ಕಳು ಹಾಗೂ ಯುವಕರು ಸೇರಿದಂತೆ ರಾಯರ ಸೇವಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು. ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.<br><br></p>.<p><strong>ಸಂಭ್ರಮದ ರಥೋತ್ಸವ</strong></p>.<p>ಹೂವಿನಹಡಗಲಿ: ಪಟ್ಟಣದಲ್ಲಿ ಮಂಗಳವಾರ ರಾಘವೇಂದ್ರ ಸ್ವಾಮಿ ರಥೋತ್ಸವ ಜರುಗಿತು.</p>.<p>ರಾಯರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ರಾಘವೇಂದ್ರ ಮಠದಲ್ಲಿನ ಬೃಂದಾವನಕ್ಕೆ ಬೆಳಿಗ್ಗೆ ಪಂಚಾಮೃತ ಅಭಿಷೇ ನೆರವೇರಿಸಲಾಯಿತು. ವಿಷ್ಣು ಸಹಸ್ರನಾಮ, ವಾಯುಸ್ತುತಿ ಪುನಶ್ಚರಣ, ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಜರುಗಿತು. ನಂತರ ಕನಕಾಭಿಷೇಕದೊಂದಿಗೆ ಪಲ್ಲಕ್ಕಿ ಉತ್ಸವ ನೆರವೇರಿತು.</p>.<p>ರಾಯರ ಭಜನೆಯೊಂದಿಗೆ ಕೋಟೆ ಪ್ರದೇಶದ ಮಹಾದ್ವಾರದವರೆಗೆ ರಥೋತ್ಸವ ಜರುಗಿತು. ಮಠದ ಧರ್ಮಕರ್ತ ವೇಣುಗೋಪಾಲ ಆಚಾರ್, ಎಸ್.ಅಶ್ವಥ ನಾರಾಯಣ, ಜಿತಾಮಿತ್ರಾಚಾರ್ಯ ಡಾ. ಫಣಿರಾಜ್, ಕೇಶವಮೂರ್ತಿ ಗೋಸಾವಿ, ರಾಘವೇಂದ್ರ ಆಚಾರ್ ಇದ್ದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>