ಪಟ್ಟಣದಲ್ಲಿ ಸೋಮವಾರ ಜಿಬಿಆರ್ ಕಾಲೇಜು ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಣದ ಆಮಿಷ, ಜಾತಿ, ಉಪ ಜಾತಿ, ತೋಳ್ಬಲಕ್ಕೆ ನಮ್ಮ ಮತಗಳು ಮಾರಾಟವಾಗುತ್ತಿರುವುದು ಅಪಾಯದ ಸಂಕೇತ. ಅಂಬೇಡ್ಕರರ ಕೊಡುಗೆಯಿಂದ ಜಗತ್ತಿಗೆ ಮಾದರಿಯಾದ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ಹೊಂದಿದ್ದೇವೆ. ಆದರ್ಶ ಸಂಸದೀಯ ವ್ಯವಸ್ಥೆಯನ್ನು ರಕ್ಷಿಸಿ, ಇನ್ನಷ್ಟು ಶಕ್ತಿಯಾಲಿಯಾಗಿ ಬೆಳೆಸಬೇಕಿದ್ದರೆ ಯುವ ಸಮೂಹ ಜವಾಬ್ದಾರಿ ಅರಿತು ಪ್ರಜಾಪ್ರಭುತ್ವದ ಕಾವಲುಗಾರರಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.