‘ರೈತರು ಈ ಕುರಿತು ಅನೇಕ ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ‘ಪ್ರಜಾವಾಣಿ’ಯಲ್ಲಿ ಬಂದ ವರದಿ ಬಳಿಕವಾದರೂ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಎಲ್ಲ ಉಪಕಾಲುವೆಗಳಲ್ಲಿ ಇದೇ ರೀತಿ ಕಳೆ ಬೆಳೆದಿದ್ದು, ಹಂತ ಹಂತವಾಗಿ ತೆರವುಗೊಳಿಸಬೇಕು. ಹೀಗಾದಾಗ ಮಾತ್ರ ಕೊನೆಯ ಭಾಗದ ರೈತರಿಗೆ ನೀರು ಸಿಗಲು ಸಾಧ್ಯ. ಚರಂಡಿ ನೀರು ಕಾಲುವೆಗಳಲ್ಲಿ ಸೇರದಂತೆ ಕ್ರಮ ಜರುಗಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ ಆಗ್ರಹಿಸಿದ್ದಾರೆ.