ಹೊಸಪೇಟೆ (ವಿಜಯನಗರ): ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಾರಾಂತ್ಯಕ್ಕೆ ವಿಶ್ವಪ್ರಸಿದ್ಧ ಹಂಪಿ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
‘ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಹಂಪಿಯ ಎಲ್ಲ ಸ್ಮಾರಕಗಳು, ದೇವಸ್ಥಾನಗಳು ಶನಿವಾರ, ಭಾನುವಾರ ಮುಚ್ಚಿರಲಿವೆ. ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ಇಲಾಖೆಯ ಹಂಪಿ ವೃತ್ತದ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ್ ದೇಸಾಯಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.