ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾವಿ ಪುನಶ್ಚೇತನ; ಪುರಾತನ ವಸ್ತುಗಳು ಪತ್ತೆ

Published 8 ಮಾರ್ಚ್ 2024, 16:20 IST
Last Updated 8 ಮಾರ್ಚ್ 2024, 16:20 IST
ಅಕ್ಷರ ಗಾತ್ರ

ಅರಸೀಕೆರೆ ( ವಿಜಯನಗರ ಜಿಲ್ಲೆ): ಹೋಬಳಿಯ ಕಮ್ಮತ್ತಹಳ್ಳಿ ಗ್ರಾಮದ ಪುರಾತನ ಬಾವಿ ಪುನಶ್ಚೇತನ ಮಾಡುವ ವೇಳೆ ದೇವರ ಕೇಲುಗಳು (ದೇವರ ಪೂಜೆ ಸಾಮಗ್ರಿಗಳುಳ್ಳ ಮಡಿಕೆ), ಶಿವಲಿಂಗ, ಬಸವಣ್ಣ ಮೂರ್ತಿಗಳು ಪತ್ತೆಯಾಗಿವೆ. ಕೇಲುಗಳನ್ನು ಮುಚ್ಚಲಾಗಿದ್ದು, ಒಳಗಡೆ ಏನಿದೆ ಎಂಬುದು ತಿಳಿದಿಲ್ಲ.

500 ವರ್ಷಗಳ ಹಳೆಯ ಬಾವಿಯನ್ನು ಪುಣಭಗಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತರಿ ಯೋಜನೆಯಡಿ ಪುನಶ್ಚೇತನ ಮಾಡಲಾಗುತ್ತಿದೆ. ಕಲ್ಲು, ಜಾಲಿಯಲ್ಲಿ ಮುಚ್ಚಿಹೋಗಿದ್ದ ಬಾವಿಯ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ₹5 ಲಕ್ಷ ಅನುದಾನದಲ್ಲಿ  ಕಾಮಗಾರಿ ನಡೆಸಿ ಪುಷ್ಕರಣಿ ರೂಪ ನೀಡಲಾಗಿದೆ. ಮುಂದುವರಿದ ಕಾಮಗಾರಿಗೆ ₹3 ಲಕ್ಷ ವೆಚ್ಚದಲ್ಲಿ ಬಾವಿ ಹೂಳು ತೆಗೆಸಲಾಗಿದೆ.

ಕ್ರಿ.ಶ 1784ರ ಸಮಯದಲ್ಲಿ ಹರಪನಹಳ್ಳಿ-ಉಚ್ಚಂಗಿದುರ್ಗವನ್ನು ಚಿತ್ರದುರ್ಗದ ಮೂಲ ಪುರುಷ ಚಿತ್ರನಾಯಕ, ಹರಪನಹಳ್ಳಿ ಸೋಮಶೇಖರ ಆಳ್ವಿಕೆ ನಡೆಸಿದ್ದಾರೆ. ವ್ಯವಸಾಯಕ್ಕೆ ಯೋಗ್ಯವಾದ ಭೂಮಿಯನ್ನು ರೈತರಿಗೆ ಕಮ್ಮತ್ತದಿಂದ ನೀಡಿದ್ದರು. ರೈತರ ಉಪಯೋಗಕ್ಕೆ ಬಾವಿಯನ್ನು ಕೊರೆಯಿಸಲಾಗಿದೆ. ಅಂದಿನ ಕಮ್ಮತ್ತವು ಇಂದು ಕಮ್ಮತ್ತಹಳ್ಳಿ ಆಗಿದೆ ಎನ್ನುತ್ತಾರೆ ಗ್ರಾಮಸ್ಥರು.

‘ಪುರಾತನ ಬಾವಿಗೆ ಪುಷ್ಕರಣಿಯ ಸ್ಪರ್ಶ ನೀಡಲಾಗಿದೆ. ಇಲ್ಲಿ ದೊರಕಿರುವ ಪ್ರಾಚೀನ ಕಾಲದ ಸಾಮಗ್ರಿಗಳು ಧಾರ್ಮಿಕ ನಂಬಿಕೆಗೆಗಳನ್ನು ಜೀವಂತವಾಗಿಸಿದೆ. ಈ ಕುರಿತು ಅಧ್ಯಯನ ನಡೆಯಬೇಕು. ಅವುಗಳ ರಕ್ಷಣೆಗೆ ಆಗಬೇಕು’ ಎಂದು ಗ್ರಾಮಸ್ಥರಾದ ಶ್ರೀನಿವಾಸ ನಾಯಕ, ತಿಪ್ಪೇಶಪ್ಪ ಒತ್ತಾಯಿಸಿದ್ದಾರೆ.

ಅರಸೀಕೆರೆ ಹೋಬಳಿಯ ಕಮ್ಮತ್ತಹಳ್ಳಿಯ ಪುರಾತನ ಬಾವಿಯಲ್ಲಿ ಪತ್ತೆಯಾದ ದೇವರ ಕೇಲುಗಳು
ಅರಸೀಕೆರೆ ಹೋಬಳಿಯ ಕಮ್ಮತ್ತಹಳ್ಳಿಯ ಪುರಾತನ ಬಾವಿಯಲ್ಲಿ ಪತ್ತೆಯಾದ ದೇವರ ಕೇಲುಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT