<p><strong>ಅರಸೀಕೆರೆ ( ವಿಜಯನಗರ ಜಿಲ್ಲೆ):</strong> ಹೋಬಳಿಯ ಕಮ್ಮತ್ತಹಳ್ಳಿ ಗ್ರಾಮದ ಪುರಾತನ ಬಾವಿ ಪುನಶ್ಚೇತನ ಮಾಡುವ ವೇಳೆ ದೇವರ ಕೇಲುಗಳು (ದೇವರ ಪೂಜೆ ಸಾಮಗ್ರಿಗಳುಳ್ಳ ಮಡಿಕೆ), ಶಿವಲಿಂಗ, ಬಸವಣ್ಣ ಮೂರ್ತಿಗಳು ಪತ್ತೆಯಾಗಿವೆ. ಕೇಲುಗಳನ್ನು ಮುಚ್ಚಲಾಗಿದ್ದು, ಒಳಗಡೆ ಏನಿದೆ ಎಂಬುದು ತಿಳಿದಿಲ್ಲ.</p>.<p>500 ವರ್ಷಗಳ ಹಳೆಯ ಬಾವಿಯನ್ನು ಪುಣಭಗಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತರಿ ಯೋಜನೆಯಡಿ ಪುನಶ್ಚೇತನ ಮಾಡಲಾಗುತ್ತಿದೆ. ಕಲ್ಲು, ಜಾಲಿಯಲ್ಲಿ ಮುಚ್ಚಿಹೋಗಿದ್ದ ಬಾವಿಯ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ₹5 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಸಿ ಪುಷ್ಕರಣಿ ರೂಪ ನೀಡಲಾಗಿದೆ. ಮುಂದುವರಿದ ಕಾಮಗಾರಿಗೆ ₹3 ಲಕ್ಷ ವೆಚ್ಚದಲ್ಲಿ ಬಾವಿ ಹೂಳು ತೆಗೆಸಲಾಗಿದೆ.</p>.<p>ಕ್ರಿ.ಶ 1784ರ ಸಮಯದಲ್ಲಿ ಹರಪನಹಳ್ಳಿ-ಉಚ್ಚಂಗಿದುರ್ಗವನ್ನು ಚಿತ್ರದುರ್ಗದ ಮೂಲ ಪುರುಷ ಚಿತ್ರನಾಯಕ, ಹರಪನಹಳ್ಳಿ ಸೋಮಶೇಖರ ಆಳ್ವಿಕೆ ನಡೆಸಿದ್ದಾರೆ. ವ್ಯವಸಾಯಕ್ಕೆ ಯೋಗ್ಯವಾದ ಭೂಮಿಯನ್ನು ರೈತರಿಗೆ ಕಮ್ಮತ್ತದಿಂದ ನೀಡಿದ್ದರು. ರೈತರ ಉಪಯೋಗಕ್ಕೆ ಬಾವಿಯನ್ನು ಕೊರೆಯಿಸಲಾಗಿದೆ. ಅಂದಿನ ಕಮ್ಮತ್ತವು ಇಂದು ಕಮ್ಮತ್ತಹಳ್ಳಿ ಆಗಿದೆ ಎನ್ನುತ್ತಾರೆ ಗ್ರಾಮಸ್ಥರು.</p>.<p>‘ಪುರಾತನ ಬಾವಿಗೆ ಪುಷ್ಕರಣಿಯ ಸ್ಪರ್ಶ ನೀಡಲಾಗಿದೆ. ಇಲ್ಲಿ ದೊರಕಿರುವ ಪ್ರಾಚೀನ ಕಾಲದ ಸಾಮಗ್ರಿಗಳು ಧಾರ್ಮಿಕ ನಂಬಿಕೆಗೆಗಳನ್ನು ಜೀವಂತವಾಗಿಸಿದೆ. ಈ ಕುರಿತು ಅಧ್ಯಯನ ನಡೆಯಬೇಕು. ಅವುಗಳ ರಕ್ಷಣೆಗೆ ಆಗಬೇಕು’ ಎಂದು ಗ್ರಾಮಸ್ಥರಾದ ಶ್ರೀನಿವಾಸ ನಾಯಕ, ತಿಪ್ಪೇಶಪ್ಪ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ ( ವಿಜಯನಗರ ಜಿಲ್ಲೆ):</strong> ಹೋಬಳಿಯ ಕಮ್ಮತ್ತಹಳ್ಳಿ ಗ್ರಾಮದ ಪುರಾತನ ಬಾವಿ ಪುನಶ್ಚೇತನ ಮಾಡುವ ವೇಳೆ ದೇವರ ಕೇಲುಗಳು (ದೇವರ ಪೂಜೆ ಸಾಮಗ್ರಿಗಳುಳ್ಳ ಮಡಿಕೆ), ಶಿವಲಿಂಗ, ಬಸವಣ್ಣ ಮೂರ್ತಿಗಳು ಪತ್ತೆಯಾಗಿವೆ. ಕೇಲುಗಳನ್ನು ಮುಚ್ಚಲಾಗಿದ್ದು, ಒಳಗಡೆ ಏನಿದೆ ಎಂಬುದು ತಿಳಿದಿಲ್ಲ.</p>.<p>500 ವರ್ಷಗಳ ಹಳೆಯ ಬಾವಿಯನ್ನು ಪುಣಭಗಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತರಿ ಯೋಜನೆಯಡಿ ಪುನಶ್ಚೇತನ ಮಾಡಲಾಗುತ್ತಿದೆ. ಕಲ್ಲು, ಜಾಲಿಯಲ್ಲಿ ಮುಚ್ಚಿಹೋಗಿದ್ದ ಬಾವಿಯ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ₹5 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಸಿ ಪುಷ್ಕರಣಿ ರೂಪ ನೀಡಲಾಗಿದೆ. ಮುಂದುವರಿದ ಕಾಮಗಾರಿಗೆ ₹3 ಲಕ್ಷ ವೆಚ್ಚದಲ್ಲಿ ಬಾವಿ ಹೂಳು ತೆಗೆಸಲಾಗಿದೆ.</p>.<p>ಕ್ರಿ.ಶ 1784ರ ಸಮಯದಲ್ಲಿ ಹರಪನಹಳ್ಳಿ-ಉಚ್ಚಂಗಿದುರ್ಗವನ್ನು ಚಿತ್ರದುರ್ಗದ ಮೂಲ ಪುರುಷ ಚಿತ್ರನಾಯಕ, ಹರಪನಹಳ್ಳಿ ಸೋಮಶೇಖರ ಆಳ್ವಿಕೆ ನಡೆಸಿದ್ದಾರೆ. ವ್ಯವಸಾಯಕ್ಕೆ ಯೋಗ್ಯವಾದ ಭೂಮಿಯನ್ನು ರೈತರಿಗೆ ಕಮ್ಮತ್ತದಿಂದ ನೀಡಿದ್ದರು. ರೈತರ ಉಪಯೋಗಕ್ಕೆ ಬಾವಿಯನ್ನು ಕೊರೆಯಿಸಲಾಗಿದೆ. ಅಂದಿನ ಕಮ್ಮತ್ತವು ಇಂದು ಕಮ್ಮತ್ತಹಳ್ಳಿ ಆಗಿದೆ ಎನ್ನುತ್ತಾರೆ ಗ್ರಾಮಸ್ಥರು.</p>.<p>‘ಪುರಾತನ ಬಾವಿಗೆ ಪುಷ್ಕರಣಿಯ ಸ್ಪರ್ಶ ನೀಡಲಾಗಿದೆ. ಇಲ್ಲಿ ದೊರಕಿರುವ ಪ್ರಾಚೀನ ಕಾಲದ ಸಾಮಗ್ರಿಗಳು ಧಾರ್ಮಿಕ ನಂಬಿಕೆಗೆಗಳನ್ನು ಜೀವಂತವಾಗಿಸಿದೆ. ಈ ಕುರಿತು ಅಧ್ಯಯನ ನಡೆಯಬೇಕು. ಅವುಗಳ ರಕ್ಷಣೆಗೆ ಆಗಬೇಕು’ ಎಂದು ಗ್ರಾಮಸ್ಥರಾದ ಶ್ರೀನಿವಾಸ ನಾಯಕ, ತಿಪ್ಪೇಶಪ್ಪ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>