ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಕಚೇರಿಯಿಂದ ಕೂಗಳತೆ ದೂರದಲ್ಲಿರುವ ಮನೆಯಲ್ಲಿ ಈ ಕೃತ್ಯ ನಡೆದಿದೆ. ಸ್ಥಳೀಯರ ಪ್ರಕಾರ, ‘ಗುರುವಾರ ಇಬ್ಬರು ಪುರುಷರು ಬಂದು ಬಟ್ಟೆ ನೋಡಿಕೊಂಡು ಹೋಗಿದ್ದಾರೆ. ಮದುವೆಗೆ ಬಟ್ಟೆ ಬೇಕಿದ್ದು, ಮದುಮಗ, ಸಂಬಂಧಿಕರನ್ನು ಕರೆದುಕೊಂಡು ನಾಳೆ ಬರುವುದಾಗಿ ಹೇಳಿ ಹೋಗಿದ್ದಾರೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಬಂದು, ಇಬ್ಬರ ಸಹೋದರಿಯರ ಕೈಕಾಲು ಕಟ್ಟಿ, ಥಳಿಸಿ ಅವರ ಒಡವೆ, ಹಣ ಕಸಿದುಕೊಂಡು ಹಿಂಬಾಗಿಲಿನಿಂದ ಓಡಿ ಹೋಗಿದ್ದಾರೆ. ಭುವನೇಶ್ವರಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅನೇಕ ವರ್ಷಗಳಿಂದ ಸಹೋದರಿಯರು ಮನೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.