ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ| ಬಟ್ಟೆ ಖರೀದಿಯ ನೆಪದಲ್ಲಿ ಬಂದು ಮಹಿಳೆಯ ಕೊಲೆ

Last Updated 22 ಅಕ್ಟೋಬರ್ 2021, 15:47 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಟ್ಟೆ ಖರೀದಿಯ ನೆಪ ಮಾಡಿಕೊಂಡು ಬಂದು ಮಹಿಳೆಯೊಬ್ಬರನ್ನು ಅವರ ಮನೆಯಲ್ಲೇ ಕೊಲೆ ಮಾಡಿರುವ ಘಟನೆ ನಗರದ ರಾಣಿಪೇಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಭುವನೇಶ್ವರಿ (58) ಮೃತ ಮಹಿಳೆ. ಇವರ ಸಹೋದರಿ ಶಿವಭೂಷಣ (56) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭುವನೇಶ್ವರಿ
ಭುವನೇಶ್ವರಿ

‘ಭುವನೇಶ್ವರಿ ಹಾಗೂ ಶಿವಭೂಷಣ ಎಂಬುವರು ಮನೆಯಲ್ಲೇ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಐದಾರೂ ಜನ ಬಟ್ಟೆ ಖರೀದಿಗೆ ಬಂದಂತೆ ನಟಿಸಿ ಅವರನ್ನು ಕೊಲೆ ಮಾಡಿರುವಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ.

ತನಿಖೆಯ ನಂತರ ನಿಖರ ಕಾರಣ ಗೊತ್ತಾಗಲಿದೆ’ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್ ಅವರ ಕಚೇರಿಯಿಂದ ಕೂಗಳತೆ ದೂರದಲ್ಲಿರುವ ಮನೆಯಲ್ಲಿ ಈ ಕೃತ್ಯ ನಡೆದಿದೆ. ಸ್ಥಳೀಯರ ಪ್ರಕಾರ, ‘ಗುರುವಾರ ಇಬ್ಬರು ಪುರುಷರು ಬಂದು ಬಟ್ಟೆ ನೋಡಿಕೊಂಡು ಹೋಗಿದ್ದಾರೆ. ಮದುವೆಗೆ ಬಟ್ಟೆ ಬೇಕಿದ್ದು, ಮದುಮಗ, ಸಂಬಂಧಿಕರನ್ನು ಕರೆದುಕೊಂಡು ನಾಳೆ ಬರುವುದಾಗಿ ಹೇಳಿ ಹೋಗಿದ್ದಾರೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಬಂದು, ಇಬ್ಬರ ಸಹೋದರಿಯರ ಕೈಕಾಲು ಕಟ್ಟಿ, ಥಳಿಸಿ ಅವರ ಒಡವೆ, ಹಣ ಕಸಿದುಕೊಂಡು ಹಿಂಬಾಗಿಲಿನಿಂದ ಓಡಿ ಹೋಗಿದ್ದಾರೆ. ಭುವನೇಶ್ವರಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅನೇಕ ವರ್ಷಗಳಿಂದ ಸಹೋದರಿಯರು ಮನೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT