ಕುಲಸಚಿವ ಪ್ರೊ.ವಿಜಯ್ ಪೂಣಚ್ಚ ತಂಬಂಡ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರ ಪ್ರಮಾಣ ಇದ್ದರೂ ಶಾಸನ ಸಭೆಗಳಲ್ಲಿ ಪುರುಷರಿಗೆ ಸಮಾನವಾದ ಪ್ರಾತಿನಿಧ್ಯ ಮಹಿಳೆಯರಿಗೆ ದೊರೆತಿಲ್ಲ. ಇದರ ಬಗ್ಗೆ ಮಹಿಳೆಯರ ಜೊತೆಗೆ ನಾವೆಲ್ಲರೂ ಧ್ವನಿ ಎತ್ತುವ ಕಾರ್ಯವಾಗಬೇಕು ಎಂದರು.