ಕೇಂದ್ರ ಸರ್ಕಾರವು ಕಾರ್ಪೊರೇಟ್ ತೆರಿಗೆಗಳನ್ನು ಇಳಿಸಿದೆ. ಅವರ ಸಾಲಗಳನ್ನು ಮನ್ನಾ ಮಾಡಿದೆ. ರೈಲ್ವೆ, ವಿಮೆ, ಬ್ಯಾಂಕ್, ಸಾರಿಗೆ, ಬಿಎಸ್ಎನ್ಎಲ್, ವಿಮಾನ ನಿಲ್ದಾಣಗಳು, ರಸ್ತೆಗಳು, ಹೆದ್ದಾರಿಗಳು, ಇತ್ಯಾದಿ ರಾಷ್ಟ್ರೀಯ ಸ್ವತ್ತುಗಳನ್ನು ಇದೇ ಕಾರ್ಪೊರೇಟ್ ಕುಳಗಳಿಗೆ ಬಿಡಿಗಾಸಿಗೆ ಮಾರಾಟ ಮಾಡುತ್ತಿದೆ. ಒಟ್ಟಾರೆ ಕೇಂದ್ರ ಬಿಜೆಪಿ ಸರ್ಕಾರ ಕಾರ್ಮಿಕರ ಬದುಕನ್ನು ಹಾಳುಗೆಡವಿದೆ ಎಂದರು.