<p><strong>ಹೊಸಪೇಟೆ (ವಿಜಯನಗರ): </strong>ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಜಾಗೃತಿ ಜಾಥಾ ನಡೆಸಲಾಯಿತು.</p>.<p>ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಎದುರು ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಜಾಥಾಕ್ಕೆ ಚಾಲನೆ ನೀಡಿದರು. ನಂತರ ನಗರದ ಪ್ರಮುಖ ಮಾರ್ಗಗಳಲ್ಲಿ ಜಾಥಾ ನಡೆಯಿತು.</p>.<p>ವಿಜಯನಗರ ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಷಣ್ಮುಖ ನಾಯಕ ಮಾತನಾಡಿ, ‘ಒಂದು ಆರೋಗ್ಯ, ಶೂನ್ಯ ಮರಣ’ ಎಂಬ ಧ್ಯೇಯ ವಾಕ್ಯದೊಂದಿಗೆ 2030ರ ವೇಳೆಗೆ ರೇಬೀಸ್ ಪ್ರಕರಣದಿಂದ ಮರಣ ಹೊಂದುವವರ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಲಾಗಿದೆ ಎಂದರು.</p>.<p>‘ಜಗತ್ತಿನಲ್ಲಿ ಹುಚ್ಚು ನಾಯಿ ಕಡಿತದಿಂದ ಸುಮಾರು 50 ರಿಂದ 55 ಸಾವಿರ ಜನ ಮರಣ ಹೊಂದುತ್ತಿದ್ದಾರೆ. ರೇಬೀಸ್ ಕಾಯಿಲೆ ಒಂದು ಸಲ ಬಂದರೆ ಮರಣ ಬಹುತೇಕ ಖಚಿತವಿದ್ದಂತೆ. ಸಮಯಕ್ಕೆ ಲಸಿಕೆಯನ್ನು ಹಾಕಿಸಿಕೊಳ್ಳುವುದರ ಮೂಲಕ ಸಾವು ತಡೆಯಬಹುದು’ ಎಂದು ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷ ಆನಂದ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ನಾಯ್ಕ, ಜಿಲ್ಲಾ ಮೆಲೇರಿಯಾ ಅಧಿಕಾರಿ ಡಾ.ಕಮಲಮ್ಮ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಟಿ.ಎಂ.ಎ.ಇ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಜಾಗೃತಿ ಜಾಥಾ ನಡೆಸಲಾಯಿತು.</p>.<p>ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಎದುರು ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಜಾಥಾಕ್ಕೆ ಚಾಲನೆ ನೀಡಿದರು. ನಂತರ ನಗರದ ಪ್ರಮುಖ ಮಾರ್ಗಗಳಲ್ಲಿ ಜಾಥಾ ನಡೆಯಿತು.</p>.<p>ವಿಜಯನಗರ ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಷಣ್ಮುಖ ನಾಯಕ ಮಾತನಾಡಿ, ‘ಒಂದು ಆರೋಗ್ಯ, ಶೂನ್ಯ ಮರಣ’ ಎಂಬ ಧ್ಯೇಯ ವಾಕ್ಯದೊಂದಿಗೆ 2030ರ ವೇಳೆಗೆ ರೇಬೀಸ್ ಪ್ರಕರಣದಿಂದ ಮರಣ ಹೊಂದುವವರ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಲಾಗಿದೆ ಎಂದರು.</p>.<p>‘ಜಗತ್ತಿನಲ್ಲಿ ಹುಚ್ಚು ನಾಯಿ ಕಡಿತದಿಂದ ಸುಮಾರು 50 ರಿಂದ 55 ಸಾವಿರ ಜನ ಮರಣ ಹೊಂದುತ್ತಿದ್ದಾರೆ. ರೇಬೀಸ್ ಕಾಯಿಲೆ ಒಂದು ಸಲ ಬಂದರೆ ಮರಣ ಬಹುತೇಕ ಖಚಿತವಿದ್ದಂತೆ. ಸಮಯಕ್ಕೆ ಲಸಿಕೆಯನ್ನು ಹಾಕಿಸಿಕೊಳ್ಳುವುದರ ಮೂಲಕ ಸಾವು ತಡೆಯಬಹುದು’ ಎಂದು ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷ ಆನಂದ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ನಾಯ್ಕ, ಜಿಲ್ಲಾ ಮೆಲೇರಿಯಾ ಅಧಿಕಾರಿ ಡಾ.ಕಮಲಮ್ಮ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಟಿ.ಎಂ.ಎ.ಇ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>