<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಯರಬಾಳು ಗ್ರಾಮದಲ್ಲಿ ಮುಸಿಯಾ ( ವನ್ಯಜೀವಿ) ದಾಳಿ ಮಾಡಿದ ಪರಿಣಾಮ ಐದು ತಿಂಗಳಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p><p>ಐದು ತಿಂಗಳಿಂದ ಗ್ರಾಮದಲ್ಲೇ ಬೀಡುಬಿಟ್ಟಿರುವ ಮುಸಿಯಾ, </p><p>ಕಳೆದ ಒಂದು ತಿಂಗಳಲ್ಲಿ 8ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದಾಗಿ ಇಡೀ ಗ್ರಾಮಸ್ಥರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.</p><p>ವಿಪರೀತವಾಗಿ ವರ್ತಿಸುತ್ತಿರುವ ಮುಸಿಯಾ, ಕಂಡ ಕಂಡವರ ಮೇಲೆ ಎರಗುತ್ತಿದೆ. ಈಗಾಗಲೇ ಎನ್. ಮಂಜಪ್ಪ, ಹನುಮಂತಪ್ಪ, ಹಾಲನಗೌಡ, ಪ್ರಹ್ಲಾದ್, ನವೀನ್, ಬಸವರಾಜ್, ಪ್ರಕಾಶ್ ಸೇರಿದಂತೆ 12ಕ್ಕೂ ಹೆಚ್ಚು ಜನರಿಗೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. </p><p>ರೈತರು ಟ್ರಾಕ್ಟರ್ ನಲ್ಲಿ ಜಮೀನಿಗೆ ಹೋಗುತ್ತಿರುವಾಗ ಹೆಚ್ಚಿನ ಸಲ ದಾಳಿ ಮಾಡಿದೆ ಎಂದು ಗಾಯಾಳು ಪ್ರಕಾಶ್ ತಿಳಿಸಿದರು. </p><p>"ದಿನದಿಂದ ದಿನಕ್ಕೆ ಗಾಯಾಳುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮುಸಿಯಾವನ್ನು ಸೆರೆಹಿಡಿದು ನಮ್ಮ ಗ್ರಾಮಕ್ಕೆ ನೆಮ್ಮದಿ ಒದಗಿಸಬೇಕು" ಎಂದು ಯರಬಾಳು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಯರಬಾಳು ಗ್ರಾಮದಲ್ಲಿ ಮುಸಿಯಾ ( ವನ್ಯಜೀವಿ) ದಾಳಿ ಮಾಡಿದ ಪರಿಣಾಮ ಐದು ತಿಂಗಳಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p><p>ಐದು ತಿಂಗಳಿಂದ ಗ್ರಾಮದಲ್ಲೇ ಬೀಡುಬಿಟ್ಟಿರುವ ಮುಸಿಯಾ, </p><p>ಕಳೆದ ಒಂದು ತಿಂಗಳಲ್ಲಿ 8ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದಾಗಿ ಇಡೀ ಗ್ರಾಮಸ್ಥರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.</p><p>ವಿಪರೀತವಾಗಿ ವರ್ತಿಸುತ್ತಿರುವ ಮುಸಿಯಾ, ಕಂಡ ಕಂಡವರ ಮೇಲೆ ಎರಗುತ್ತಿದೆ. ಈಗಾಗಲೇ ಎನ್. ಮಂಜಪ್ಪ, ಹನುಮಂತಪ್ಪ, ಹಾಲನಗೌಡ, ಪ್ರಹ್ಲಾದ್, ನವೀನ್, ಬಸವರಾಜ್, ಪ್ರಕಾಶ್ ಸೇರಿದಂತೆ 12ಕ್ಕೂ ಹೆಚ್ಚು ಜನರಿಗೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. </p><p>ರೈತರು ಟ್ರಾಕ್ಟರ್ ನಲ್ಲಿ ಜಮೀನಿಗೆ ಹೋಗುತ್ತಿರುವಾಗ ಹೆಚ್ಚಿನ ಸಲ ದಾಳಿ ಮಾಡಿದೆ ಎಂದು ಗಾಯಾಳು ಪ್ರಕಾಶ್ ತಿಳಿಸಿದರು. </p><p>"ದಿನದಿಂದ ದಿನಕ್ಕೆ ಗಾಯಾಳುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮುಸಿಯಾವನ್ನು ಸೆರೆಹಿಡಿದು ನಮ್ಮ ಗ್ರಾಮಕ್ಕೆ ನೆಮ್ಮದಿ ಒದಗಿಸಬೇಕು" ಎಂದು ಯರಬಾಳು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>