ಮ್ಯಾಗಳಮನಿ ಪ್ರವೀಣ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ‘ಕುಟುಂಬದ ಆಸ್ತಿ ಹಂಚಿಕೆಯ ವಿಷಯದಲ್ಲಿ ಹಸ್ತಕ್ಷೇಪ ಮಾಡಿರುವ ಗ್ರಾಮದ ಮುಖಂಡರಾದ ಅಕ್ಕಿ ತೋಟೇಶ್, ಬಾಚಿನಹಳ್ಳಿ ಆನಂದ ಮತ್ತು ತಂಬ್ರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಮಾರುತಿ ಅವರು ಕಿರುಕುಳ ನೀಡಿದ್ದಾರೆ ಎಂದು ಕ್ರಿಮಿನಾಶಕ ಬಾಟಲಿ ಕೈಯಲ್ಲಿ ಹಿಡಿದುಕೊಂಡು’ ಪ್ರವೀಣ್ ವಿಡಿಯೊ ಮಾಡಿದ್ದಾರೆ. ವಿಡಿಯೊದಲ್ಲಿ ಮೂವರ ವಿರುದ್ಧ ಅಶ್ಲೀಲ ಮಾತುಗಳನ್ನು ಆಡಿದ್ದಾರೆ.