ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ನಗರದ ಬಹುತೇಕ ಮನೆಗಳಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ಸರಿಯಾಗಿ ಸಾರ್ವಜನಿಕರು ವಿದ್ಯುತ್ ದೀಪಗಳನ್ನು ಆರಿಸಿ ಮೇಣದ ಬತ್ತಿ, ಹಣತೆ, ಟಾರ್ಚ್, ಲಾಟೀನು, ಮೊಬೈಲ್ ಟಾರ್ಚ್ ಬೆಳಗಿಸುವ ಮೂಲಕ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಿದರು.