<p><strong>ವಿಜಯಪುರ</strong>: ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ನಗರದ ಬಹುತೇಕ ಮನೆಗಳಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ಸರಿಯಾಗಿ ಸಾರ್ವಜನಿಕರು ವಿದ್ಯುತ್ ದೀಪಗಳನ್ನು ಆರಿಸಿ ಮೇಣದ ಬತ್ತಿ, ಹಣತೆ, ಟಾರ್ಚ್, ಲಾಟೀನು, ಮೊಬೈಲ್ ಟಾರ್ಚ್ ಬೆಳಗಿಸುವ ಮೂಲಕ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಿದರು.</p>.<p>ಕೆಲವರು ಮನೆಯ ಹೊಸ್ತಿನಲ್ಲಿ, ಇನ್ನು ಕೆಲವರು ಮನೆಯ ಅಂಗಳದಲ್ಲಿ, ಮತ್ತೆ ಕೆಲವರು ಮನೆಯ ಬಾಲ್ಕನಿಯಲ್ಲಿ, ಹಲವರು ರಸ್ತೆಗಿಳಿದುದೀಪಬೆಳಗಿಸಿದರು.</p>.<p>ರಂಗೋಲಿಯಲ್ಲಿ ಭಾರತ ನಕಾಶೆ ಬಿಡಿಸಿ ಅದರಲ್ಲಿ ಹಣತೆಯನ್ನು ಇಟ್ಟು ಗಮನ ಸೆಳೆದರು. ಭಾರತ್ ಮಾತಾಕೀ ಜೈ, ಪ್ರಧಾನಿ ನರೇಂದ್ರ ಮೋದಿಗೆ ಜೈ ಎಂಬ ಘೋಷಣೆಗಳು ಮೊಳಗಿದವು. ಕೆಲ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾರ್ವಜನಿಕಕರಿಗೆ ಹಣತೆಯನ್ನು ಹಂಚುವ ಮೂಲಕ ದೀಪ ಬೆಳಗಿಸಲು ಪ್ರೋತ್ಸಾಹಿಸಿದರು.</p>.<p>ಮುಖಕ್ಕೆ ಮಾಸ್ಕ್ ತೊಟ್ಟು, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ದೀಪ ಬೆಳಗಿಸುವ ದೃಶ್ಯ ಕಂಡುಬಂದಿತು. ಬಹುತೇಕ ಕಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮುಖಕ್ಕೆ ಮಾಸ್ಕ್ ತೊಡದೇ ದೀಪ ಬೆಳಗಿಸುವಲ್ಲಿ ನಿರತವಾಗಿದ್ದರು. ಮನೆಗಳಲ್ಲಿ ಶ್ಲೋಕ ಪಠಣ, ಭಜನೆ ಗಾಯನ ಕೇಳಿಬಂದಿತು. ಕೆಲವು ಮನೆಗಳಲ್ಲಿ ಎಂದಿನಂತೆ ವಾತಾವರಣ ಇತ್ತು. ಪ್ರಧಾನಿ ಕರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.</p>.<p>ವಿರೋಧ: ಕೊರೊನಾ ವಿರುದ್ಧದ ನಿರ್ಣಯಕ ಹೋರಾಟದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೀಪ ಬೆಳಗಿಸುವ ಅಭಿಯಾನಕ್ಕೆ ಕರೆ ನೀಡಿದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಖಂಡಿಸಿದೆ.</p>.<p>ಕೊರೊನಾ ಸೋಂಕು ನಿವಾರಣೆಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಮತ್ತುದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಖಾ ಕಡಪಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ನಗರದ ಬಹುತೇಕ ಮನೆಗಳಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ಸರಿಯಾಗಿ ಸಾರ್ವಜನಿಕರು ವಿದ್ಯುತ್ ದೀಪಗಳನ್ನು ಆರಿಸಿ ಮೇಣದ ಬತ್ತಿ, ಹಣತೆ, ಟಾರ್ಚ್, ಲಾಟೀನು, ಮೊಬೈಲ್ ಟಾರ್ಚ್ ಬೆಳಗಿಸುವ ಮೂಲಕ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಿದರು.</p>.<p>ಕೆಲವರು ಮನೆಯ ಹೊಸ್ತಿನಲ್ಲಿ, ಇನ್ನು ಕೆಲವರು ಮನೆಯ ಅಂಗಳದಲ್ಲಿ, ಮತ್ತೆ ಕೆಲವರು ಮನೆಯ ಬಾಲ್ಕನಿಯಲ್ಲಿ, ಹಲವರು ರಸ್ತೆಗಿಳಿದುದೀಪಬೆಳಗಿಸಿದರು.</p>.<p>ರಂಗೋಲಿಯಲ್ಲಿ ಭಾರತ ನಕಾಶೆ ಬಿಡಿಸಿ ಅದರಲ್ಲಿ ಹಣತೆಯನ್ನು ಇಟ್ಟು ಗಮನ ಸೆಳೆದರು. ಭಾರತ್ ಮಾತಾಕೀ ಜೈ, ಪ್ರಧಾನಿ ನರೇಂದ್ರ ಮೋದಿಗೆ ಜೈ ಎಂಬ ಘೋಷಣೆಗಳು ಮೊಳಗಿದವು. ಕೆಲ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾರ್ವಜನಿಕಕರಿಗೆ ಹಣತೆಯನ್ನು ಹಂಚುವ ಮೂಲಕ ದೀಪ ಬೆಳಗಿಸಲು ಪ್ರೋತ್ಸಾಹಿಸಿದರು.</p>.<p>ಮುಖಕ್ಕೆ ಮಾಸ್ಕ್ ತೊಟ್ಟು, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ದೀಪ ಬೆಳಗಿಸುವ ದೃಶ್ಯ ಕಂಡುಬಂದಿತು. ಬಹುತೇಕ ಕಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮುಖಕ್ಕೆ ಮಾಸ್ಕ್ ತೊಡದೇ ದೀಪ ಬೆಳಗಿಸುವಲ್ಲಿ ನಿರತವಾಗಿದ್ದರು. ಮನೆಗಳಲ್ಲಿ ಶ್ಲೋಕ ಪಠಣ, ಭಜನೆ ಗಾಯನ ಕೇಳಿಬಂದಿತು. ಕೆಲವು ಮನೆಗಳಲ್ಲಿ ಎಂದಿನಂತೆ ವಾತಾವರಣ ಇತ್ತು. ಪ್ರಧಾನಿ ಕರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.</p>.<p>ವಿರೋಧ: ಕೊರೊನಾ ವಿರುದ್ಧದ ನಿರ್ಣಯಕ ಹೋರಾಟದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೀಪ ಬೆಳಗಿಸುವ ಅಭಿಯಾನಕ್ಕೆ ಕರೆ ನೀಡಿದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಖಂಡಿಸಿದೆ.</p>.<p>ಕೊರೊನಾ ಸೋಂಕು ನಿವಾರಣೆಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಮತ್ತುದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಖಾ ಕಡಪಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>