<p><strong>ವಿಜಯಪುರ: </strong>ಇಲ್ಲಿನ ಎಪಿಎಂಸಿ ತರಕಾರಿ ಮಾರುಕಟ್ಟೆ ಆವರಣ ಮತ್ತು ಕಿರಾಣಾ ಬಜಾರದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತವು ಸಾರ್ವಜನಿಕರ ಬಳಕೆಗಾಗಿ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಸ್ಥಾಪಿಸಿದೆ.</p>.<p>ಸ್ಯಾನಿಟೈಜರ್ ಬೂತ್ಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ್, ಸಾರ್ವಜನಿಕರ, ರೈತರ, ಗ್ರಾಹಕರ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಸ್ಥಾಪಿಸಿರುವುದು ಉತ್ತಮ ಕೆಲಸ ಎಂದರು.</p>.<p>ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿರುವ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಮತ್ತು ಜಿಲ್ಲಾಸ್ಪತ್ರೆ ಆವರಣದಲ್ಲಿ ಸ್ಥಾಪಿಸುವಂತೆ ಅವರು ಸೂಚಿಸಿದರು.</p>.<p>ಸಾರ್ವಜನಿಕರು ಕೂಡ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಇದರ ಸದುಪಯೋಗ ಪಡೆಯಬೇಕು. ಕೊರೊನಾ ಸೋಂಕು ಹರಡದಂತೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಎ.ಪಿ.ಎಂ.ಸಿ ಉಪ ಕಾರ್ಯದರ್ಶಿ ಕುಮಾರಸ್ವಾಮಿ, ಸಹಾಯಕ ನಿರ್ದೇಶಕ ಚಬನೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಇಲ್ಲಿನ ಎಪಿಎಂಸಿ ತರಕಾರಿ ಮಾರುಕಟ್ಟೆ ಆವರಣ ಮತ್ತು ಕಿರಾಣಾ ಬಜಾರದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತವು ಸಾರ್ವಜನಿಕರ ಬಳಕೆಗಾಗಿ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಸ್ಥಾಪಿಸಿದೆ.</p>.<p>ಸ್ಯಾನಿಟೈಜರ್ ಬೂತ್ಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ್, ಸಾರ್ವಜನಿಕರ, ರೈತರ, ಗ್ರಾಹಕರ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಸ್ಥಾಪಿಸಿರುವುದು ಉತ್ತಮ ಕೆಲಸ ಎಂದರು.</p>.<p>ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿರುವ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಮತ್ತು ಜಿಲ್ಲಾಸ್ಪತ್ರೆ ಆವರಣದಲ್ಲಿ ಸ್ಥಾಪಿಸುವಂತೆ ಅವರು ಸೂಚಿಸಿದರು.</p>.<p>ಸಾರ್ವಜನಿಕರು ಕೂಡ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಇದರ ಸದುಪಯೋಗ ಪಡೆಯಬೇಕು. ಕೊರೊನಾ ಸೋಂಕು ಹರಡದಂತೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಎ.ಪಿ.ಎಂ.ಸಿ ಉಪ ಕಾರ್ಯದರ್ಶಿ ಕುಮಾರಸ್ವಾಮಿ, ಸಹಾಯಕ ನಿರ್ದೇಶಕ ಚಬನೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>