ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಹತ್ತಿ ವ್ಯಾಪಾರ ಸೋಮವಾರದಿಂದ ಆರಂಭ: ರೈತರಲ್ಲಿ ಮೂಡಿದ ಸಂತಸ

Last Updated 2 ಮೇ 2020, 14:33 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರದಿಂದ ಹತ್ತಿ ವ್ಯಾಪಾರ ಪುನರಾರಂಭಿಸುವುದಾಗಿ ಹತ್ತಿ ವ್ಯಾಪಾರಿಗಳ ಸಂಘ ತಿಳಿಸಿದೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ಇಲ್ಲಿನ ಎಪಿಎಂಸಿ ಯಾರ್ಡ್‌ನಲ್ಲಿ ಇಲ್ಲಿಯವರೆಗೆ ಬಂದ್‌ ಮಾಡಲಾಗಿದ್ದ ಹತ್ತಿ ವ್ಯಾಪಾರ, ವಹಿವಾಟನ್ನು ಮೇ 4ರಿಂದ ಪುನರಾಂಭಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರ ಮರ್ಚಂಟ್ಸ್‌ ಅಸೋಸಿಯೇಶನ್ ಅಧ್ಯಕ್ಷ ರವೀಂದ್ರ ಎಸ್.ಬಿಜ್ಜರಗಿ ತಿಳಿಸಿದ್ದಾರೆ.

ವ್ಯಾಪಾರಸ್ಥರು, ರೈತರು, ಗುಮಾಸ್ತರು, ಹಮಾಲರು, ತಳದವರು, ಲಾರಿ ಹಮಾಲರು, ವಾಹನ ಚಾಲಕರು ತಪ್ಪದೇ ಮಾಸ್ಕ್‌ ಧರಿಸಿ ಮತ್ತು ನಿಗದಿತ ಅಂತರ ಕಾಯ್ದುಕೊಂಡು ವ್ಯಾಪಾರ ಪ್ರಾರಂಭಿಸುವ ಮೂಲಕ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT