<p><strong>ವಿಜಯಪುರ</strong>: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವ ಹಾಗೂ ತಮ್ಮ ಪುತ್ರಿಯ ವಿವಾಹದ ದ್ಯೋತಕವಾಗಿ 101 ಜೋಡಿಯ ಸಾಮೂಹಿಕ ವಿವಾಹ ಶೀಘ್ರದಲ್ಲೇ ಆಯೋಜಿಸುತ್ತಿರುವುದಾಗಿ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.29ರಂದು ತಮ್ಮ ಹಿರಿಯ ಪುತ್ರಿ ಸಂಯುಕ್ತಾ ಪಾಟೀಲ ಅವರ ವಿವಾಹ ಮಹೋತ್ಸವ ನಡೆಯಲಿದೆ. ಅದೇ ದಿನ ಸಾಮೂಹಿಕ ವಿವಾಹ ಏರ್ಪಡಿಸುವ ಉದ್ದೇಶವಿತ್ತು. ಆದರೆ, ಕೋವಿಡ್ ಕಾರಣದಿಂದ ಅನುಮತಿ ಸಿಕ್ಕಿಲ್ಲ ಎಂದರು.</p>.<p>ಶೀಘ್ರದಲ್ಲೇ ಸಾಮೂಹಿಕ ವಿವಾಹ ಏರ್ಪಡಿಸಲು ಸಿದ್ಧತೆ ನಡೆದಿದೆ. ಆರ್ಥಿಕ ಬಿಕ್ಕಟ್ಟಿನಲ್ಲಿರುವ ಬಡ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಮೂಹಿಕ ವಿವಾಹವನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದರು.</p>.<p>ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಲಿಚ್ಛಿಸುವವರು ಹೆಸರು ನೋಂದಾಯಿಸಲು ಅವಕಾಶವಿದೆ. ಇಚ್ಛೆಯುಳ್ಳ ಎಲ್ಲ ಜಾತಿ, ಧರ್ಮದವರೂ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಬಹುದು. ಎಲ್ಲ ಖರ್ಚುವೆಚ್ಚವನ್ನು ತಾವೇ ಭರಿಸುವುದಾಗಿ ಹೇಳಿದರು.</p>.<p>ಸಂಯುಕ್ತಾ ಅವರ ವಿವಾಹ ಕಾರ್ಯಕ್ರಮ ನ.29ರಂದು ಸಂಜೆ 5.30ಕ್ಕೆ ನಗರದ ಬೇಗಂ ತಲಾಬ್ ಬಳಿ ನಡೆಯಲಿದೆ. ಖುದ್ದಾಗಿ ಯಾರಿಗೂ ಆಮಂತ್ರಣ ಪತ್ರಿಕೆ ತಲುಪಿಸಲು ಸಾಧ್ಯವಾಗಿಲ್ಲ. ವಿವಾಹ ಕಾರ್ಯಕ್ರಮಕ್ಕೆ ಹಿತೈಷಿಗಳು, ಸ್ನೇಹಿತರು, ಬೆಂಬಲಿಗರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.</p>.<p>ಬಿಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತಾ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವ ಹಾಗೂ ತಮ್ಮ ಪುತ್ರಿಯ ವಿವಾಹದ ದ್ಯೋತಕವಾಗಿ 101 ಜೋಡಿಯ ಸಾಮೂಹಿಕ ವಿವಾಹ ಶೀಘ್ರದಲ್ಲೇ ಆಯೋಜಿಸುತ್ತಿರುವುದಾಗಿ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.29ರಂದು ತಮ್ಮ ಹಿರಿಯ ಪುತ್ರಿ ಸಂಯುಕ್ತಾ ಪಾಟೀಲ ಅವರ ವಿವಾಹ ಮಹೋತ್ಸವ ನಡೆಯಲಿದೆ. ಅದೇ ದಿನ ಸಾಮೂಹಿಕ ವಿವಾಹ ಏರ್ಪಡಿಸುವ ಉದ್ದೇಶವಿತ್ತು. ಆದರೆ, ಕೋವಿಡ್ ಕಾರಣದಿಂದ ಅನುಮತಿ ಸಿಕ್ಕಿಲ್ಲ ಎಂದರು.</p>.<p>ಶೀಘ್ರದಲ್ಲೇ ಸಾಮೂಹಿಕ ವಿವಾಹ ಏರ್ಪಡಿಸಲು ಸಿದ್ಧತೆ ನಡೆದಿದೆ. ಆರ್ಥಿಕ ಬಿಕ್ಕಟ್ಟಿನಲ್ಲಿರುವ ಬಡ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಮೂಹಿಕ ವಿವಾಹವನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದರು.</p>.<p>ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಲಿಚ್ಛಿಸುವವರು ಹೆಸರು ನೋಂದಾಯಿಸಲು ಅವಕಾಶವಿದೆ. ಇಚ್ಛೆಯುಳ್ಳ ಎಲ್ಲ ಜಾತಿ, ಧರ್ಮದವರೂ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಬಹುದು. ಎಲ್ಲ ಖರ್ಚುವೆಚ್ಚವನ್ನು ತಾವೇ ಭರಿಸುವುದಾಗಿ ಹೇಳಿದರು.</p>.<p>ಸಂಯುಕ್ತಾ ಅವರ ವಿವಾಹ ಕಾರ್ಯಕ್ರಮ ನ.29ರಂದು ಸಂಜೆ 5.30ಕ್ಕೆ ನಗರದ ಬೇಗಂ ತಲಾಬ್ ಬಳಿ ನಡೆಯಲಿದೆ. ಖುದ್ದಾಗಿ ಯಾರಿಗೂ ಆಮಂತ್ರಣ ಪತ್ರಿಕೆ ತಲುಪಿಸಲು ಸಾಧ್ಯವಾಗಿಲ್ಲ. ವಿವಾಹ ಕಾರ್ಯಕ್ರಮಕ್ಕೆ ಹಿತೈಷಿಗಳು, ಸ್ನೇಹಿತರು, ಬೆಂಬಲಿಗರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.</p>.<p>ಬಿಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತಾ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>