<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಜನವರಿಯಿಂದ ಮೇ ವರೆಗೆ ಒಟ್ಟು 310 ಜನರ ರಕ್ತವನ್ನು ಪರೀಕ್ಷೆ ಮಾಡಲಾಗಿದ್ದು, 102 ಜನರಿಗೆ ಡೆಂಗಿ ದೃಡಪಟ್ಟಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಡೆಂಗಿ ರೋಗ ನಿಯಂತ್ರಣಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಸಿಂದಗಿ ತಾಲ್ಲೂಕಿನಲ್ಲಿ 22 ಜನರಿಗೆ ಡೆಂಗಿ ದೃಡಪಟ್ಟಿದೆ. ಬಸವನ ಬಾಗೇವಾಡಿಯಲ್ಲಿ 15, ಮುದ್ದೆಬಿಹಾಳ 12, ಇಂಡಿ 23, ವಿಜಯಪುರ 30 ಜನರಿಗೆ ಕಾಣಿಸಿಕೊಂಡಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಡೆಂಗಿ ರೋಗ ಪರೀಕ್ಷಿಸಲು ಜಿಲ್ಲಾಸ್ಪತ್ರೆಯಲ್ಲಿ ಡಿ.ಪಿ.ಎಚ್.ಎಲ್ ಲ್ಯಾಬ್ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದರು.</p>.<p>ಡೆಂಗಿ ರೋಗ ನಿಯಂತ್ರಣ ಸಂಬಂಧ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಲಾರ್ವಾ ಸರ್ವೇ ಹಾಗೂ ಜನರಿಗೆ ತಿಳಿಹೇಳುವ ಕಾರ್ಯ ಕೈಗೊಂಡಿದ್ದಾರೆ ಎಂದು ಹೇಳಿದರು.</p>.<p>ಹೆಚ್ಚಿನ ಪ್ರಮಾಣದಲ್ಲಿ ಡೆಂಗಿ ಕಂಡುಬಂದಿರುವ ಪ್ರದೇಶಗಳ ಬಡವರಿಗೆ ಇಲಾಖೆಯಿಂದ ಉಚಿತವಾಗಿ ಸೊಳ್ಳೆ ಪರದೆಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಡೆಂಗಿ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳು ಒಳಚರಂಡಿ ಹಾಗೂ ಕೊಳಚೆ ಪ್ರದೇಶಗಳನ್ನು ಸ್ವಚ್ಛವಾಗಿಡಲು ತಿಳಿಸಲಾಗಿದೆ ಎಂದರು.</p>.<p>ನಗರ ಹಾಗೂ ಪಟ್ಟಣ ಪ್ರದೇಶಗಳ ಪರಿಸರದಲ್ಲಿ ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸುವ ಸಲುವಾಗಿ ಈಗಿರುವ ನಾಗರಿಕ ಬೈಲಾಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ ಹಾಗೂ ಅನುಪಯುಕ್ತ ಹಾಗೂ ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆಯಿಂದ ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬ್ಯುಸಿಯಾಗಳನ್ನು ಬೆಳೆಸಿ ಜಿಲ್ಲೆಯಾದ್ಯಂತ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದ್ದು, ಈಗಾಗಲೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಗಪ್ಪಿ ಹಾಗೂ ಗ್ಯಾಂಬ್ಯುಸಿಯಾ ಮೀನುಗಳನ್ನು ಬಿಡಲಾಗಿದೆ. ಅಗತ್ಯ ಸ್ಥಳಗಳಲ್ಲಿ ಈ ಮೀನುಗಳನ್ನು ಸೂಕ್ತ ಸಮಯದಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ ಎಂದರು.</p>.<p>ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕೀಟಶಾಸ್ತ್ರಜ್ಞ ಡಾ. ರಿಯಾಜ್ ದೇವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಜನವರಿಯಿಂದ ಮೇ ವರೆಗೆ ಒಟ್ಟು 310 ಜನರ ರಕ್ತವನ್ನು ಪರೀಕ್ಷೆ ಮಾಡಲಾಗಿದ್ದು, 102 ಜನರಿಗೆ ಡೆಂಗಿ ದೃಡಪಟ್ಟಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಡೆಂಗಿ ರೋಗ ನಿಯಂತ್ರಣಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಸಿಂದಗಿ ತಾಲ್ಲೂಕಿನಲ್ಲಿ 22 ಜನರಿಗೆ ಡೆಂಗಿ ದೃಡಪಟ್ಟಿದೆ. ಬಸವನ ಬಾಗೇವಾಡಿಯಲ್ಲಿ 15, ಮುದ್ದೆಬಿಹಾಳ 12, ಇಂಡಿ 23, ವಿಜಯಪುರ 30 ಜನರಿಗೆ ಕಾಣಿಸಿಕೊಂಡಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಡೆಂಗಿ ರೋಗ ಪರೀಕ್ಷಿಸಲು ಜಿಲ್ಲಾಸ್ಪತ್ರೆಯಲ್ಲಿ ಡಿ.ಪಿ.ಎಚ್.ಎಲ್ ಲ್ಯಾಬ್ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದರು.</p>.<p>ಡೆಂಗಿ ರೋಗ ನಿಯಂತ್ರಣ ಸಂಬಂಧ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಲಾರ್ವಾ ಸರ್ವೇ ಹಾಗೂ ಜನರಿಗೆ ತಿಳಿಹೇಳುವ ಕಾರ್ಯ ಕೈಗೊಂಡಿದ್ದಾರೆ ಎಂದು ಹೇಳಿದರು.</p>.<p>ಹೆಚ್ಚಿನ ಪ್ರಮಾಣದಲ್ಲಿ ಡೆಂಗಿ ಕಂಡುಬಂದಿರುವ ಪ್ರದೇಶಗಳ ಬಡವರಿಗೆ ಇಲಾಖೆಯಿಂದ ಉಚಿತವಾಗಿ ಸೊಳ್ಳೆ ಪರದೆಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಡೆಂಗಿ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳು ಒಳಚರಂಡಿ ಹಾಗೂ ಕೊಳಚೆ ಪ್ರದೇಶಗಳನ್ನು ಸ್ವಚ್ಛವಾಗಿಡಲು ತಿಳಿಸಲಾಗಿದೆ ಎಂದರು.</p>.<p>ನಗರ ಹಾಗೂ ಪಟ್ಟಣ ಪ್ರದೇಶಗಳ ಪರಿಸರದಲ್ಲಿ ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸುವ ಸಲುವಾಗಿ ಈಗಿರುವ ನಾಗರಿಕ ಬೈಲಾಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ ಹಾಗೂ ಅನುಪಯುಕ್ತ ಹಾಗೂ ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆಯಿಂದ ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬ್ಯುಸಿಯಾಗಳನ್ನು ಬೆಳೆಸಿ ಜಿಲ್ಲೆಯಾದ್ಯಂತ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದ್ದು, ಈಗಾಗಲೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಗಪ್ಪಿ ಹಾಗೂ ಗ್ಯಾಂಬ್ಯುಸಿಯಾ ಮೀನುಗಳನ್ನು ಬಿಡಲಾಗಿದೆ. ಅಗತ್ಯ ಸ್ಥಳಗಳಲ್ಲಿ ಈ ಮೀನುಗಳನ್ನು ಸೂಕ್ತ ಸಮಯದಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ ಎಂದರು.</p>.<p>ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕೀಟಶಾಸ್ತ್ರಜ್ಞ ಡಾ. ರಿಯಾಜ್ ದೇವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>