ವಿಜಯಪುರ: ನಿಡಗುಂದಿ ತಾಲ್ಲೂಕಿನ ಹಾಲಿಹಾಳ ಗ್ರಾಮದಲ್ಲಿ ಶುಕ್ರವಾರ ಸಿಡಿಲು ಬಡಿದು ಎರಡು ಆಡಿನ ಮರಿಗಳು ಸಾವನ್ನಪ್ಪಿವೆ.
ಹೊಲದಲ್ಲಿ ಕುರಿ ಕಾಯುತ್ತಿದ್ದ ಶಿವಸಂಗಪ್ಪ ರಾಯಪ್ಪ ಬೇವಿನಕಟ್ಟಿಗೆ ಸಿಡಲಿನ ಝಳಕ್ಕೆ ತಾಗಿ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಸಲೀಂ ಯಲಗೋಡ, ಪಶುವೈದ್ಯಾಧಿಕಾರಿ ಡಾ ಮಹೇಶ ಹೂಗಾರ, ಗ್ರಾಮ ಲೆಕ್ಕಾಧಿಕಾರಿ ಎ.ಆರ್. ಘಂಟಿ ಭೇಟಿ ನೀಡಿ ಪರಿಶೀಲಿಸಿದರು.